25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

ಇಂದಬೆಟ್ಟು: ಇಲ್ಲಿಯ ಅರ್ಧನಾರೀಶ್ವರ ದೇವಸ್ಥಾನದ ದ್ವಾರದಿಂದ ದೇವಸ್ಥಾನದವರೆಗೆ ಹಾಕಿದ ಪೈಪ್ ಲೈನ್ ಗಳು ಒಡೆದು ಹೋಗಿ ಹಲವು ದಿನಗಳಿಂದ ಆ ಪರಿಸರದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಆದರೆ ಪಂಚಾಯತ್ ನವರು ಈವರೆಗೆ ಪೈಪ್ ದುರಸ್ತಿಗೊಳಿಸದೆ ಇದ್ದುದರಿಂದ ಪಂಚಾಯತ್ ನ ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರವರು ಅ.2 ರಂದು ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾ.ಪಂ. ಅಧ್ಯಕ್ಷೆ ಆಶಾಲತ ರವರು ದೇವಸ್ಥಾನ ಬಳಿ ಕೆಲಸಗಳು ನಡೆಯುತ್ತಿರುವ ಸಂದರ್ಭ ವಾಹನಗಳು ಸಂಚರಿಸುವಾಗ ಪೈಪ್ ಗಳು ಒಡೆದುಹೋಗಿರುತ್ತದೆ. ಇವುಗಳನ್ನು ಹಲವಾರು ಭಾರಿ ದುರಸ್ತಿ ಮಾಡಲಾಗಿತ್ತು, ಈಗ ದೇವಸ್ಥಾನದ ಬಳಿಯ ಕೆಲಸ ಮುಗಿದಿದ್ದು ನಾಳೆ (ಅ.3 ) ಒಡೆದು ಹೋದ ಪೈಪ್ ಗಳನ್ನು ದುರಸ್ತಿಗೊಳಿಸುವುದಾಗಿ ಈಗಾಗಲೇ ವೆಂಕಪ್ಪ ಕೋಟ್ಯಾನ್ ರವರಿಗೆ ತಿಳಿಸಲಾಗಿತ್ತು ಎಂದರು.

Related posts

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ‘ನವಚೇತನ’ ಶಿಬಿರ: ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಸೋಣಂದೂರು: ಬಲ್ಪುಂಜ ನಿವಾಸಿ ದಾಮೋದರ್ ಸಾಲಿಯಾನ್ ನಿಧನ

Suddi Udaya

ಎಕ್ಸೆಲ್ ಕಾಲೇಜು ಭರವಸೆಯ ಪ್ರತೀಕ, ಶಕ್ತಿಯ ಮೂಲ,ಭವಿಷ್ಯದ ಕೇಂದ್ರ ಶೈಕ್ಷಣಿಕ ಕ್ಷೇತ್ರದ ಅದ್ಬುತ ಯುವ ಸಾಧಕ ಸುಮಂತ್ ಕುಮಾರ್ ರವರ ಇಚ್ಚಾಶಕ್ತಿ ಮತ್ತು ಬದ್ಧತೆಯನ್ನು ಮೆಚ್ಚುವಂತದ್ದು ಎಕ್ಸೆಲ್ ಕಾಲೇಜಿನ ಶೈಕ್ಷಣಿಕ ಸಾಧನೆಯನ್ನು ಕೊಂಡಾಡಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ್

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya
error: Content is protected !!