39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಹೊಸಖಂಡ ಎಂಬಲ್ಲಿನ ವಿಕಲಚೇತನ ಫಲಾನುಭವಿಯಾದ ಪಕೀರ ಮುಗೇರಾ ಇವರ ಮಾಸಿಕ ಪೋಷಣಾಭತ್ಯೆಯು ಆಧಾರ್ ಚೀಟಿಯ ತಾಂತ್ರಿಕ ದೋಷದಿಂದ 2 ತಿಂಗಳಿಂದ ಸ್ಥಗಿತ ವಾಗಿರುದನ್ನು ತಿಳಿದುಕೊಂಡ ಉಜಿರೆ ಪಂಚಾಯತ್ ನ ಗ್ರಾಮೀಣ ವಿಆರ್.ಡಬ್ಲ್ಯೂ ಆದಂತಹ ವಿಪುಲ್ ಪೂಜಾರಿ ಇವರು ಸಂಬಂಧಿಸಿದ ಪಲಾನುಭವಿಯ ಆಧಾರ್ ಚೀಟಿಯ ತಾಂತ್ರಿಕ ದೋಷವನ್ನು ಸರಿಪಡಿಸಲು ಸಹಾಯ ಮಾಡುವಂತೆ ಕೋರಲು ಮನವಿ ಪತ್ರ ನೀಡಲು ಸೆ.30 ರಂದು ಸೂಚಿಸಿದ ಹಿನ್ನಲೆಯಿಂದ ಅ. 01 ರಂದು ಪಲಾನುಭವಿಯ ಬೇಡಿಕೆಯಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಹಾಗೂ ಪಂಚಾಯತ್ ಆಡಳಿತ ಮಂಡಳಿಯ ಸಂಪೂರ್ಣ ಸಹಕಾರದೊಂದಿಗೆ ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯಾದ ಭವಾನಿ ಶಂಕರ್ ಇವರ ಮೆಚ್ಚುಗೆಯೊಂದಿಗೆ ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಭ್ಯಾಪ್ಟಿಸ್ಟ್ ಇವರ ಸಲಹೆ ಸೂಚನೆಯಂತೆ ಜಿಲ್ಲಾಧಿಕಾರಿಯವರ ಕಛೇರಿಯ ಆಧಾರ್ ಕೇಂದ್ರಕ್ಕೆ ಫಲಾನುಭವಿಯವರನ್ನು ಕರೆ ತಂದು ಪಕೀರಾ ಮುಗೇರಾ ಇವರ ಆಧಾರ್ ನ್ನು ಸರಿಪಡಿಸಲಾಯಿತು.

ಈ ಸಂದರ್ಭದಲ್ಲಿ ಚಿರಂಜೀವಿ, ಗ್ರಾಮೀಣ ವಿ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತ್, ಕಣಿಯೂರು ಇವರು ಕೂಡ ಜೊತೆಗಿದ್ದು ಸಹಕರಿಸಿದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

Suddi Udaya

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!