23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

ಉಜಿರೆ : ಗಾಂಧೀಜಿಯವರ ತತ್ವಗಳು ನಶಿಸಿ ಹೋಗಿವೆ ಆದರೆ ಅವರ ಕೆಲವು ತತ್ವಗಳು ಇವತ್ತಿಗೂ ಪಾಲಿಸುತ್ತಾರೆ ಸತ್ಯವನ್ನು ಹೇಳಬೇಕು ,ಸರಳವಾಗಿರಬೇಕು, ನಮ್ಮ ಕೆಲಸವನ್ನು ನಾವೇ ಮಾಡಬೇಕು ಒಂದು ಕೆನ್ನೆಗೆ ಒಡೆದಾಗ ಇನ್ನೊಂದು ಕೆನ್ನೆ ತೋರಿಸಬೇಕು ಎಂದು ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ತಿಳಿಸಿದರು.


ಅವರು ಅ. 2 ರಂದು ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿಧ್ಯಾರ್ಥಿನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ನಡೆದ ಗಾಂಧೀಜಿಜಯಂತಿ ಕಾರ್ಯಕ್ರಮದಲ್ಲಿ ಪುಷ್ಪನಮನ ಮಾಡಿ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜರವರು ಮಾತನಾಡಿ ಕೆಲವನ್ನು ನೋಡುವುದರ ಮೂಲಕ ಕಲಿಯಬೇಕು ಕೆಲವನ್ನು ಮಾಡುವುದರ ಮೂಲಕ ಕಲಿಯಬೇಕು. ಮಾರ್ಕ್ಸ್ ಗಿಂತ ರಿಮಾರ್ಕ್ ಇಲ್ಲದೆ ಬದುಕುವುದು ಉತ್ತಮ.
ಇತ್ತಿಚೀನ ದಿನಗಳಲ್ಲಿ ಮಕ್ಕಳಿಗೆ ಶಿಕ್ಷಣ ದ ಜೊತೆಗೆ ಜೀವನ ಶಿಕ್ಷಣ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ರೆಸಿಡೆನ್ಸಿಯಲ್ ಕಾಲೇಜಿನ ಪಾಂಶುಪಾಲರಾದ ಸುನಿಲ್ ಪಂಡಿತ್ ಸ್ವಾಗತಿಸಿ ರತ್ನಮಾನಸದ ಅದ್ಯಪಕರಾದ ರವಿಚಂದ್ರರವರು ಧನ್ಯವಾದ ಸಲ್ಲಿಸಿದರು.


ಕಾರ್ಯಕ್ರಮದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಪಾಲಕಾರದ ವಿಶ್ವನಾಥ ಹಾಗೂ ಶಿಕ್ಷಕರಾದ ಅಕಿಲ್ ,ರೋಷನ್ ,ಉಮೇಶ್ ಮತ್ತು ರತ್ನಮಾನಸ ದ ಶಿಕ್ಷಕರಾದ ಉದಯರಾಜ್ ,ದೀಪಕ್ ಕೆ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya

ಇಂದಬೆಟ್ಟು: ಪಿಲಾಪ್ಪಾಡಿ ನಿವಾಸಿ ಕುಸುಮಾವತಿ ನಿಧನ

Suddi Udaya

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya

ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya
error: Content is protected !!