26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಜಿರೆ: ಇಲ್ಲಿನ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.

ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ವಿದ್ಯಾರ್ಥಿಗಳಾದ ಅದ್ವಿತಿ – ಭಗವದ್ಗೀತೆಯ ಶ್ಲೋಕಗಳನ್ನು ,ಅನಾಸ್ – ಕುರಾನ್ ಮತ್ತು ಅಕ್ಷರ್ – ಜೈನ ನಮೋಮಂತ್ರ ವನ್ನು ಪಟಿಸಿದರು. ಹತ್ತನೇ ತರಗತಿಯ ಸುಮಿತ್ರ ಗಾಂಧೀಜಿಯವರ ಶುಭಾಶಿತಗಳನ್ನು ಪ್ರಸ್ತುತ ಪಡಿಸಿ, ಮೋಕ್ಷಾ ಲಾಲ್ ಬಹದ್ದೂರ್ ಶಾಸ್ತ್ರೀ ಯವರ ಕುರಿತು ಮಾತನಾಡಿದರು.
ಏಳನೇ ತರಗತಿಯ ರಚನ ಗಾಂಧೀಜಿಯ ಜಯಂತಿಯ ಮಹತ್ವವನ್ನು ತಿಳಿಸಿದರು.


ವಿದ್ಯಾರ್ಥಿಗಳಿಂದ ಗಾಂಧೀಜಿಯವರು ಬಾಲ್ಯದಲ್ಲಿ ಪ್ರಾಮಾಣಿಕತೆಯನ್ನು ಮೆರೆದ ವಿಷಯವನ್ನು ಕುರಿತಾದ ಮತ್ತು
ಗಾಂಧೀಜಿಯವರು ವೀಕ್ಷಿಸಿದ ಶ್ರವಣ ಕುಮಾರ ನಾಟಕದಿಂದ ಅವರ ಜೀವನದಲ್ಲಿ ಆದ ಬದಲಾವಣೆಯ ಕುರಿತಾದ ನಾಟಕವನ್ನು ಪ್ರಸ್ತುತ ಪಡಿಸಲಾಯಿತು.

ಸ್ವಚ್ಛತಾ ಪ್ರತಿಜ್ಞೆ ಸ್ವೀಕರಿಸಿ ಶಾಲೆಯ ವಠಾರದಲ್ಲಿ ಸ್ವಚ್ಛತೆ ಕೈಗೊಳ್ಳಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಮಧುಶ್ರೀ ನಿರೂಪಿಸಿ ದೀಪಿಕಾ ಸ್ವಾಗತಿಸಿ ಕವನ ವಂದಿಸಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya
error: Content is protected !!