ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

/05/nisarga-curtain-online-advt-copy.jpg"/>

ಕುವೆಟ್ಟು: ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ವಹಿಸಿದ್ದರು, ಎಸ್‌ಡಿಎಂಸಿ ಸದಸ್ಯರು, ಅಧ್ಯಾಪಕ ವೃಂದದವರು ಭಾಗವಹಿಸಿದರು.

ಸಾಮೂಹಿಕ ಪ್ರಾರ್ಥನೆಯನ್ನು ಮಾಡಿ ರಘುಪತಿ ರಾಘವ ಗೀತೆಯನ್ನು ಹಾಡಿಸಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಗಾಂಧೀಜಿಯವರ ಬಗ್ಗೆ ಜಿಪಿಟಿ ಅಧ್ಯಾಪಕ ಕಿರಣ್ ಎಸ್ ಪಿ ತಿಳಿಸಿದರು, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಸ್ವಾಗತಿಸಿ, ಸಹ ಶಿಕ್ಷಕಿ ದವಲಾ ಕಾರ್ಯಕ್ರಮ ನಿರೂಪಿಸಿ, ಜಿಪಿಟಿ ಆಧ್ಯಾಪಕಿ ಶಶಿಕಲಾ ವಂದಿಸಿದರು‌.

Leave a Comment

error: Content is protected !!