25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆಸಿ ಸಪ್ತಾಹಕ್ಕೆ 3 ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಜೆಸಿಐ ಮಡಂತ್ಯಾರಿನಿಂದ ವರ್ಣರಂಜಿತ ಜೇಸಿ ಸಪ್ತಾಹ ‘ವಿಜಯ’-2024: ವಿವಿಧ ಕ್ಷೇತ್ರದ 15 ಸಾಧಕರಿಗೆ ಜೇಸಿ ಪುರಸ್ಕಾರ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ವೈಭವ, ಯಕ್ಷಗಾನ

ಮಡಂತ್ಯಾರು: ಜೆಸಿಐ ಮಡಂತ್ಯಾರು ಸಂಸ್ಥೆಯು ಕಳೆದ 33 ವರ್ಷಗಳಿಂದ ಅದ್ಬುತ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಎಲ್ಲರ ಗಮನ ಸೆಳೆದ ಸಂಸ್ಥೆಯಾಗಿದೆ. ಒಂದು ವಾರಗಳ ಕಾಲ ಜೆಸಿ ಸಪ್ತಾಹವನ್ನು ಮಡಂತ್ಯಾರಿನ ಹಬ್ಬವಾಗಿ ಆಚರಿಸಿ ಜೆಸಿಐ ಭಾರತದಲ್ಲಿ ಅದ್ದೂರಿಯ ಜೆಸಿ ಸಪ್ತಾಹಕ್ಕೆ ಮೂರು ಬಾರಿ ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ಪಡೆದಿದೆ ಎಂದು ಮಡಂತ್ಯಾರು ಜೆಸಿಐ ಘಟಕದ ಪೂರ್ವಾದ್ಯಕ್ಷ ತುಳಸಿದಾಸ್ ಪೈ ಹೇಳಿದರು.

ಅವರು ಅ. 2ರಂದು ಸುವರ್ಣ ಆರ್ಕೇಡ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮಡಂತ್ಯಾರು ಘಟಕಾಧ್ಯಕ್ಷ ವಿಕೇಶ್ ಮಾನ್ಯರವರ ಅಧ್ಯಕ್ಷತೆಯಲ್ಲಿ ಈ ಬಾರಿಯ ವರ್ಣರಂಜಿತ ಜೆಸಿ ಸಪ್ತಾಹ ‘ವಿಜಯ’ ಸರ್ವತ್ರ ವಿಜಯೀ ಪ್ರಾಪ್ತಿ ರಸ್ತು – 2024 ಅ‌ 13 ರಿಂದ 19 ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದರು.

ಸಪ್ತಾಹದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ನೇರವೇರಿಸಲಿದ್ದಾರೆ. ದೀಪ ಪ್ರಜ್ವಲನೆಯನ್ನು ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಮಾಜಿ ಆಡಳಿತ ಮೊಕ್ತೇಸರ ಕಡಂದಲೆ ಸುರೇಶ್ ಭಂಡಾರಿ ಮಾಡಲಿದ್ದಾರೆ. ಏಳು ದಿನ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರತಿ ದಿನ ವಿವಿಧ ಮನೋರಂಜನಾ ಕಾರ್ಯಕ್ರಮಗಳು, ಸ್ಪರ್ದೆಗಳು, ನಾಟಕ, ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ವಿಶೇಷವಾಗಿ ವಿವಿಧ ಕ್ಷೇತ್ರದ 15 ಸಾಧಕರಿಗೆ ಜೆಸಿ ಸಾಧನಾ ಪುರಸ್ಕಾರವನ್ನು ನೀಡಿ ಗೌರವಿಸಲಾಗುತ್ತಿದ್ದು, ಸಪ್ತಾಹದ ಸಮಾರೋಪದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆಸಿಐ ಮಡಂತ್ಯಾರು ಅಧ್ಯಕ್ಷ ವಿಕೇಶ್ ಮಾನ್ಯ, ನಿಕಟಪೂರ್ವಾಧ್ಯಕ್ಷ ಅಶೋಕ್ ಗುಂಡಿಯಲ್ಕೆ, ಕಾರ್ಯದರ್ಶಿ ಸಂಯುಕ್ತ್ ಪೂಜಾರಿ, ಸಪ್ತಾಹ ಸಂಯೋಜಕ ಯತೀಶ್ ರೈ,ಸಹ ಸಂಯೋಜಕ ಮನೋಜ್ ಮಾಯಿಲೋಡಿ ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಬಳಂಜ : ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya
error: Content is protected !!