25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ: ಗಾಂಧೀಜಿ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ನಾಯಕರು ಗಾಂಧೀಜಿಯವರ ಸಮಯಪ್ರಜ್ಞೆ ಸರಳ ಜೀವನ ಸೇವಾ ಮನೋಭಾವ ಸ್ವಚ್ಛತೆ ನುಡಿದಂತೆ ನಡೆದ ಅವರ ಬದುಕು ನಮಗೆಲ್ಲಾ ಪ್ರಯಾಣ ಈಗ ಪ್ರೇರಣೆಯಾಗಬೇಕು ಎಂದು ನಿವೃತ್ತ ಉಪನ್ಯಾಸಕರು ದ.ಕ ಗಮಕ ಕಲಾ ಪರಿಷತ್ತು ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದರು.

ಮಹಾತ್ಮ ಗಾಂಧೀಜಿಯವರು ನಮ್ಮನ್ನು ಅಗಲಿ ಎಷ್ಟೋ ವರ್ಷಗಳಾದರೂ, ಅವರು ಬಿಟ್ಟುಹೋದ ಆದರ್ಶಗಳು ಇಂದಿಗೂ, ಎಂದೆಂದಿಗೂ ಪ್ರಸ್ತುತ. ನಮ್ಮ ಮೇಲೆ ಗಾಢವಾಗಿ ಪರಿಣಾಮ ಬೀರಿದ ಗಾಂಧಿಜೀಯವರ ಸತ್ಯ, ಅಹಿಂಸೆ, ಶಾಂತಿ ಹಾಗೂ ಸರಳ ಜೀವನ. ಈ ಸಂದೇಶಗಳನ್ನು ಎಲ್ಲರೂ ಪಾಲಿಸಿಬಿಟ್ಟರೆ ಜಗತ್ತಿನ ಎಷ್ಟೋ ಸಮಸ್ಯೆಗಳು ಪರಿಹಾರವಾಗುತ್ತವೆ.
ಇಂದು ನಮಗೆ ಜಗತ್ತಿನಲ್ಲಿ ಶಾಂತಿ ಬೇಕಾಗಿದೆ. ಹಿಂಸೆಯಿಂದ ಸಾಧಿಸುವಂಥದ್ದು ಏನೂ ಇಲ್ಲ. ಶಾಂತಿಯಿಂದಲೇ ಬಗೆಹರಿಸಿಕೊಳ್ಳಬೇಕು. ನಮ್ಮ ಹೋರಾಟ, ಚಳವಳಿಗಳೂ ಅಹಿಂಸಾಮಾರ್ಗದಲ್ಲಿಯೇ ಸಾಗಲಿ ಎಂಬ ಮೇಲ್ಪಂಕ್ತಿ ಹಾಕಿದವರು ಬಾಪೂಜಿ ಎಂದರು.

ಈ ಸಂದರ್ಭದಲ್ಲಿ ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ,ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಸೇವಾದಳದ ಅಧ್ಯಕ್ಷ ಪ್ರದೀಪ್ ಕೆ ಸಿ ಗ್ರಾಮೀಣ ಎಸ್ ಸಿ ಘಟಕದ ಅಧ್ಯಕ್ಷ ನೇಮಿರಾಜ್ ಕಿಲ್ಲೂರು, ಜಿಲ್ಲಾ ಅರೋಗ್ಯ್ರ ರಕ್ಷಾ ಸಮಿತಿಯ ಸದಸ್ಯರಾದ ಅಬ್ದುಲ್‌ ಕರೀಮ್ ಗೇರುಕಟ್ಟೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ವಂದಾನ ಭಂಡಾರಿ ಹಾಗೂ ಸರ್ಕಾರದ ನಾಮನಿರ್ದೇಶಿತ ಸದಸ್ಯರು ,ಪಕ್ಷದ ವಿವಿಧ ಸಮಿತಿಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್ ಹಾಕಿದ ಪ್ರಕರಣ; ಯುವತಿಗೆ ಜಾಮೀನು ಮಂಜೂರು

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!