23.6 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

ಇಂದಬೆಟ್ಟು: ಇಲ್ಲಿಯ ಅರ್ಧನಾರೀಶ್ವರ ದೇವಸ್ಥಾನದ ದ್ವಾರದಿಂದ ದೇವಸ್ಥಾನದವರೆಗೆ ಹಾಕಿದ ಪೈಪ್ ಲೈನ್ ಗಳು ಒಡೆದು ಹೋಗಿ ಹಲವು ದಿನಗಳಿಂದ ಆ ಪರಿಸರದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಆದರೆ ಪಂಚಾಯತ್ ನವರು ಈವರೆಗೆ ಪೈಪ್ ದುರಸ್ತಿಗೊಳಿಸದೆ ಇದ್ದುದರಿಂದ ಪಂಚಾಯತ್ ನ ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರವರು ಅ.2 ರಂದು ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾ.ಪಂ. ಅಧ್ಯಕ್ಷೆ ಆಶಾಲತ ರವರು ದೇವಸ್ಥಾನ ಬಳಿ ಕೆಲಸಗಳು ನಡೆಯುತ್ತಿರುವ ಸಂದರ್ಭ ವಾಹನಗಳು ಸಂಚರಿಸುವಾಗ ಪೈಪ್ ಗಳು ಒಡೆದುಹೋಗಿರುತ್ತದೆ. ಇವುಗಳನ್ನು ಹಲವಾರು ಭಾರಿ ದುರಸ್ತಿ ಮಾಡಲಾಗಿತ್ತು, ಈಗ ದೇವಸ್ಥಾನದ ಬಳಿಯ ಕೆಲಸ ಮುಗಿದಿದ್ದು ನಾಳೆ (ಅ.3 ) ಒಡೆದು ಹೋದ ಪೈಪ್ ಗಳನ್ನು ದುರಸ್ತಿಗೊಳಿಸುವುದಾಗಿ ಈಗಾಗಲೇ ವೆಂಕಪ್ಪ ಕೋಟ್ಯಾನ್ ರವರಿಗೆ ತಿಳಿಸಲಾಗಿತ್ತು ಎಂದರು.

Related posts

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya

ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್

Suddi Udaya
error: Content is protected !!