25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

ಇಂದಬೆಟ್ಟು: ಇಲ್ಲಿಯ ಅರ್ಧನಾರೀಶ್ವರ ದೇವಸ್ಥಾನದ ದ್ವಾರದಿಂದ ದೇವಸ್ಥಾನದವರೆಗೆ ಹಾಕಿದ ಪೈಪ್ ಲೈನ್ ಗಳು ಒಡೆದು ಹೋಗಿ ಹಲವು ದಿನಗಳಿಂದ ಆ ಪರಿಸರದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಆದರೆ ಪಂಚಾಯತ್ ನವರು ಈವರೆಗೆ ಪೈಪ್ ದುರಸ್ತಿಗೊಳಿಸದೆ ಇದ್ದುದರಿಂದ ಪಂಚಾಯತ್ ನ ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರವರು ಅ.2 ರಂದು ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾ.ಪಂ. ಅಧ್ಯಕ್ಷೆ ಆಶಾಲತ ರವರು ದೇವಸ್ಥಾನ ಬಳಿ ಕೆಲಸಗಳು ನಡೆಯುತ್ತಿರುವ ಸಂದರ್ಭ ವಾಹನಗಳು ಸಂಚರಿಸುವಾಗ ಪೈಪ್ ಗಳು ಒಡೆದುಹೋಗಿರುತ್ತದೆ. ಇವುಗಳನ್ನು ಹಲವಾರು ಭಾರಿ ದುರಸ್ತಿ ಮಾಡಲಾಗಿತ್ತು, ಈಗ ದೇವಸ್ಥಾನದ ಬಳಿಯ ಕೆಲಸ ಮುಗಿದಿದ್ದು ನಾಳೆ (ಅ.3 ) ಒಡೆದು ಹೋದ ಪೈಪ್ ಗಳನ್ನು ದುರಸ್ತಿಗೊಳಿಸುವುದಾಗಿ ಈಗಾಗಲೇ ವೆಂಕಪ್ಪ ಕೋಟ್ಯಾನ್ ರವರಿಗೆ ತಿಳಿಸಲಾಗಿತ್ತು ಎಂದರು.

Related posts

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

Suddi Udaya
error: Content is protected !!