23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

ಇಂದಬೆಟ್ಟು: ಇಲ್ಲಿಯ ಅರ್ಧನಾರೀಶ್ವರ ದೇವಸ್ಥಾನದ ದ್ವಾರದಿಂದ ದೇವಸ್ಥಾನದವರೆಗೆ ಹಾಕಿದ ಪೈಪ್ ಲೈನ್ ಗಳು ಒಡೆದು ಹೋಗಿ ಹಲವು ದಿನಗಳಿಂದ ಆ ಪರಿಸರದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಆದರೆ ಪಂಚಾಯತ್ ನವರು ಈವರೆಗೆ ಪೈಪ್ ದುರಸ್ತಿಗೊಳಿಸದೆ ಇದ್ದುದರಿಂದ ಪಂಚಾಯತ್ ನ ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರವರು ಅ.2 ರಂದು ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾ.ಪಂ. ಅಧ್ಯಕ್ಷೆ ಆಶಾಲತ ರವರು ದೇವಸ್ಥಾನ ಬಳಿ ಕೆಲಸಗಳು ನಡೆಯುತ್ತಿರುವ ಸಂದರ್ಭ ವಾಹನಗಳು ಸಂಚರಿಸುವಾಗ ಪೈಪ್ ಗಳು ಒಡೆದುಹೋಗಿರುತ್ತದೆ. ಇವುಗಳನ್ನು ಹಲವಾರು ಭಾರಿ ದುರಸ್ತಿ ಮಾಡಲಾಗಿತ್ತು, ಈಗ ದೇವಸ್ಥಾನದ ಬಳಿಯ ಕೆಲಸ ಮುಗಿದಿದ್ದು ನಾಳೆ (ಅ.3 ) ಒಡೆದು ಹೋದ ಪೈಪ್ ಗಳನ್ನು ದುರಸ್ತಿಗೊಳಿಸುವುದಾಗಿ ಈಗಾಗಲೇ ವೆಂಕಪ್ಪ ಕೋಟ್ಯಾನ್ ರವರಿಗೆ ತಿಳಿಸಲಾಗಿತ್ತು ಎಂದರು.

Related posts

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!