23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಹೊಸಖಂಡ ಎಂಬಲ್ಲಿನ ವಿಕಲಚೇತನ ಫಲಾನುಭವಿಯಾದ ಪಕೀರ ಮುಗೇರಾ ಇವರ ಮಾಸಿಕ ಪೋಷಣಾಭತ್ಯೆಯು ಆಧಾರ್ ಚೀಟಿಯ ತಾಂತ್ರಿಕ ದೋಷದಿಂದ 2 ತಿಂಗಳಿಂದ ಸ್ಥಗಿತ ವಾಗಿರುದನ್ನು ತಿಳಿದುಕೊಂಡ ಉಜಿರೆ ಪಂಚಾಯತ್ ನ ಗ್ರಾಮೀಣ ವಿಆರ್.ಡಬ್ಲ್ಯೂ ಆದಂತಹ ವಿಪುಲ್ ಪೂಜಾರಿ ಇವರು ಸಂಬಂಧಿಸಿದ ಪಲಾನುಭವಿಯ ಆಧಾರ್ ಚೀಟಿಯ ತಾಂತ್ರಿಕ ದೋಷವನ್ನು ಸರಿಪಡಿಸಲು ಸಹಾಯ ಮಾಡುವಂತೆ ಕೋರಲು ಮನವಿ ಪತ್ರ ನೀಡಲು ಸೆ.30 ರಂದು ಸೂಚಿಸಿದ ಹಿನ್ನಲೆಯಿಂದ ಅ. 01 ರಂದು ಪಲಾನುಭವಿಯ ಬೇಡಿಕೆಯಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಹಾಗೂ ಪಂಚಾಯತ್ ಆಡಳಿತ ಮಂಡಳಿಯ ಸಂಪೂರ್ಣ ಸಹಕಾರದೊಂದಿಗೆ ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯಾದ ಭವಾನಿ ಶಂಕರ್ ಇವರ ಮೆಚ್ಚುಗೆಯೊಂದಿಗೆ ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಭ್ಯಾಪ್ಟಿಸ್ಟ್ ಇವರ ಸಲಹೆ ಸೂಚನೆಯಂತೆ ಜಿಲ್ಲಾಧಿಕಾರಿಯವರ ಕಛೇರಿಯ ಆಧಾರ್ ಕೇಂದ್ರಕ್ಕೆ ಫಲಾನುಭವಿಯವರನ್ನು ಕರೆ ತಂದು ಪಕೀರಾ ಮುಗೇರಾ ಇವರ ಆಧಾರ್ ನ್ನು ಸರಿಪಡಿಸಲಾಯಿತು.

ಈ ಸಂದರ್ಭದಲ್ಲಿ ಚಿರಂಜೀವಿ, ಗ್ರಾಮೀಣ ವಿ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತ್, ಕಣಿಯೂರು ಇವರು ಕೂಡ ಜೊತೆಗಿದ್ದು ಸಹಕರಿಸಿದರು.

Related posts

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya

ಭಾರತೀಯ ನೌಕಾಪಡೆಗೆ ಬಾರ್ಯದ ಅಜಯ್ ಜೋಹಾನ್ ಬ್ರಾಗ್ಸ್, ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ, ಶಿಲಾನ್ಯಾಸ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ರಾ. ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya
error: Content is protected !!