24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

ಉಜಿರೆ : ಗಾಂಧೀಜಿಯವರ ತತ್ವಗಳು ನಶಿಸಿ ಹೋಗಿವೆ ಆದರೆ ಅವರ ಕೆಲವು ತತ್ವಗಳು ಇವತ್ತಿಗೂ ಪಾಲಿಸುತ್ತಾರೆ ಸತ್ಯವನ್ನು ಹೇಳಬೇಕು ,ಸರಳವಾಗಿರಬೇಕು, ನಮ್ಮ ಕೆಲಸವನ್ನು ನಾವೇ ಮಾಡಬೇಕು ಒಂದು ಕೆನ್ನೆಗೆ ಒಡೆದಾಗ ಇನ್ನೊಂದು ಕೆನ್ನೆ ತೋರಿಸಬೇಕು ಎಂದು ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ತಿಳಿಸಿದರು.


ಅವರು ಅ. 2 ರಂದು ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿಧ್ಯಾರ್ಥಿನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ನಡೆದ ಗಾಂಧೀಜಿಜಯಂತಿ ಕಾರ್ಯಕ್ರಮದಲ್ಲಿ ಪುಷ್ಪನಮನ ಮಾಡಿ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜರವರು ಮಾತನಾಡಿ ಕೆಲವನ್ನು ನೋಡುವುದರ ಮೂಲಕ ಕಲಿಯಬೇಕು ಕೆಲವನ್ನು ಮಾಡುವುದರ ಮೂಲಕ ಕಲಿಯಬೇಕು. ಮಾರ್ಕ್ಸ್ ಗಿಂತ ರಿಮಾರ್ಕ್ ಇಲ್ಲದೆ ಬದುಕುವುದು ಉತ್ತಮ.
ಇತ್ತಿಚೀನ ದಿನಗಳಲ್ಲಿ ಮಕ್ಕಳಿಗೆ ಶಿಕ್ಷಣ ದ ಜೊತೆಗೆ ಜೀವನ ಶಿಕ್ಷಣ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ರೆಸಿಡೆನ್ಸಿಯಲ್ ಕಾಲೇಜಿನ ಪಾಂಶುಪಾಲರಾದ ಸುನಿಲ್ ಪಂಡಿತ್ ಸ್ವಾಗತಿಸಿ ರತ್ನಮಾನಸದ ಅದ್ಯಪಕರಾದ ರವಿಚಂದ್ರರವರು ಧನ್ಯವಾದ ಸಲ್ಲಿಸಿದರು.


ಕಾರ್ಯಕ್ರಮದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಪಾಲಕಾರದ ವಿಶ್ವನಾಥ ಹಾಗೂ ಶಿಕ್ಷಕರಾದ ಅಕಿಲ್ ,ರೋಷನ್ ,ಉಮೇಶ್ ಮತ್ತು ರತ್ನಮಾನಸ ದ ಶಿಕ್ಷಕರಾದ ಉದಯರಾಜ್ ,ದೀಪಕ್ ಕೆ ಉಪಸ್ಥಿತರಿದ್ದರು.

Related posts

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya
error: Content is protected !!