23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

ಉಜಿರೆ : ಗಾಂಧೀಜಿಯವರ ತತ್ವಗಳು ನಶಿಸಿ ಹೋಗಿವೆ ಆದರೆ ಅವರ ಕೆಲವು ತತ್ವಗಳು ಇವತ್ತಿಗೂ ಪಾಲಿಸುತ್ತಾರೆ ಸತ್ಯವನ್ನು ಹೇಳಬೇಕು ,ಸರಳವಾಗಿರಬೇಕು, ನಮ್ಮ ಕೆಲಸವನ್ನು ನಾವೇ ಮಾಡಬೇಕು ಒಂದು ಕೆನ್ನೆಗೆ ಒಡೆದಾಗ ಇನ್ನೊಂದು ಕೆನ್ನೆ ತೋರಿಸಬೇಕು ಎಂದು ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ತಿಳಿಸಿದರು.


ಅವರು ಅ. 2 ರಂದು ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿಧ್ಯಾರ್ಥಿನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ನಡೆದ ಗಾಂಧೀಜಿಜಯಂತಿ ಕಾರ್ಯಕ್ರಮದಲ್ಲಿ ಪುಷ್ಪನಮನ ಮಾಡಿ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜರವರು ಮಾತನಾಡಿ ಕೆಲವನ್ನು ನೋಡುವುದರ ಮೂಲಕ ಕಲಿಯಬೇಕು ಕೆಲವನ್ನು ಮಾಡುವುದರ ಮೂಲಕ ಕಲಿಯಬೇಕು. ಮಾರ್ಕ್ಸ್ ಗಿಂತ ರಿಮಾರ್ಕ್ ಇಲ್ಲದೆ ಬದುಕುವುದು ಉತ್ತಮ.
ಇತ್ತಿಚೀನ ದಿನಗಳಲ್ಲಿ ಮಕ್ಕಳಿಗೆ ಶಿಕ್ಷಣ ದ ಜೊತೆಗೆ ಜೀವನ ಶಿಕ್ಷಣ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ರೆಸಿಡೆನ್ಸಿಯಲ್ ಕಾಲೇಜಿನ ಪಾಂಶುಪಾಲರಾದ ಸುನಿಲ್ ಪಂಡಿತ್ ಸ್ವಾಗತಿಸಿ ರತ್ನಮಾನಸದ ಅದ್ಯಪಕರಾದ ರವಿಚಂದ್ರರವರು ಧನ್ಯವಾದ ಸಲ್ಲಿಸಿದರು.


ಕಾರ್ಯಕ್ರಮದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಪಾಲಕಾರದ ವಿಶ್ವನಾಥ ಹಾಗೂ ಶಿಕ್ಷಕರಾದ ಅಕಿಲ್ ,ರೋಷನ್ ,ಉಮೇಶ್ ಮತ್ತು ರತ್ನಮಾನಸ ದ ಶಿಕ್ಷಕರಾದ ಉದಯರಾಜ್ ,ದೀಪಕ್ ಕೆ ಉಪಸ್ಥಿತರಿದ್ದರು.

Related posts

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

Suddi Udaya

ಖೋ ಖೋ ಪಂದ್ಯಾಟ : ನಯನಾಡು ಸರಕಾರಿ‌ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

Suddi Udaya
error: Content is protected !!