ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

ಉಜಿರೆ : ಗಾಂಧೀಜಿಯವರ ತತ್ವಗಳು ನಶಿಸಿ ಹೋಗಿವೆ ಆದರೆ ಅವರ ಕೆಲವು ತತ್ವಗಳು ಇವತ್ತಿಗೂ ಪಾಲಿಸುತ್ತಾರೆ ಸತ್ಯವನ್ನು ಹೇಳಬೇಕು ,ಸರಳವಾಗಿರಬೇಕು, ನಮ್ಮ ಕೆಲಸವನ್ನು ನಾವೇ ಮಾಡಬೇಕು ಒಂದು ಕೆನ್ನೆಗೆ ಒಡೆದಾಗ ಇನ್ನೊಂದು ಕೆನ್ನೆ ತೋರಿಸಬೇಕು ಎಂದು ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ತಿಳಿಸಿದರು.


ಅವರು ಅ. 2 ರಂದು ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿಧ್ಯಾರ್ಥಿನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ನಡೆದ ಗಾಂಧೀಜಿಜಯಂತಿ ಕಾರ್ಯಕ್ರಮದಲ್ಲಿ ಪುಷ್ಪನಮನ ಮಾಡಿ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜರವರು ಮಾತನಾಡಿ ಕೆಲವನ್ನು ನೋಡುವುದರ ಮೂಲಕ ಕಲಿಯಬೇಕು ಕೆಲವನ್ನು ಮಾಡುವುದರ ಮೂಲಕ ಕಲಿಯಬೇಕು. ಮಾರ್ಕ್ಸ್ ಗಿಂತ ರಿಮಾರ್ಕ್ ಇಲ್ಲದೆ ಬದುಕುವುದು ಉತ್ತಮ.
ಇತ್ತಿಚೀನ ದಿನಗಳಲ್ಲಿ ಮಕ್ಕಳಿಗೆ ಶಿಕ್ಷಣ ದ ಜೊತೆಗೆ ಜೀವನ ಶಿಕ್ಷಣ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ರೆಸಿಡೆನ್ಸಿಯಲ್ ಕಾಲೇಜಿನ ಪಾಂಶುಪಾಲರಾದ ಸುನಿಲ್ ಪಂಡಿತ್ ಸ್ವಾಗತಿಸಿ ರತ್ನಮಾನಸದ ಅದ್ಯಪಕರಾದ ರವಿಚಂದ್ರರವರು ಧನ್ಯವಾದ ಸಲ್ಲಿಸಿದರು.


ಕಾರ್ಯಕ್ರಮದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಪಾಲಕಾರದ ವಿಶ್ವನಾಥ ಹಾಗೂ ಶಿಕ್ಷಕರಾದ ಅಕಿಲ್ ,ರೋಷನ್ ,ಉಮೇಶ್ ಮತ್ತು ರತ್ನಮಾನಸ ದ ಶಿಕ್ಷಕರಾದ ಉದಯರಾಜ್ ,ದೀಪಕ್ ಕೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!