25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

ಉಜಿರೆ: ಗಾಂಧೀಜಿ ಮತ್ತು ಶಾಸ್ತ್ರೀಜಿ ಅವರು ಸಾತ್ವಿಕ ಬದುಕು ಹಾಗೂ ಆದರ್ಶಗಳನ್ನು ಮೈಗೂಡಿಸಿಕೊಂಡು ನಾಯಕರಾದವರು. ಅಂತಹ ಮಹಾನ್ ವ್ಯಕ್ತಿಗಳ ಜಯಂತಿಯಂದು ಸ್ವಚ್ಛತಾ ಜಾಥಾ ಹಾಗೂ ಅಭಿಯಾನ ಸ್ತುತ್ಯರ್ಹ. ಪ್ರತಿಯೊಬ್ಬರಲ್ಲೂ ಸ್ವಚ್ಛತೆಯ ಅರಿವು ಹಾಗೂ ಜಾಗೃತಿ ಅಗತ್ಯವಾಗಿದೆ. ನಾವು ಬದಲಾದರೆ ಸಮಾಜ ಹಾಗೂ ದೇಶವೇ ಬದಲಾಗುತ್ತದೆ. ಒಟ್ಟಾರೆ ಸ್ವಚ್ಛ ಪರಿಸರ ಸ್ವಸ್ಥ ಜೀವನಕ್ಕೆ ನಾಂದಿ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ , ರೋವರ್ಸ್ ಹಾಗೂ ರೇಂಜರ್ಸ್ ಮತ್ತು ಜೂನಿಯರ್ ರೆಡ್ ಕ್ರಾಸ್ ಗಳ ಸಹಯೋಗದಲ್ಲಿ ಗಾಂಧೀ ಹಾಗೂ ಶಾಸ್ತ್ರೀ ಜಯಂತಿ ಅಂಗವಾಗಿ ನಡೆದ ಸ್ವಚ್ಛತಾ ಪ್ರತಿಜ್ಞೆ ಹಾಗೂ ಸ್ವಚ್ಛತಾ ಜಾಥಾ ಹಾಗೂ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಗೆ ಸ್ವಚ್ಛತಾ ಪ್ರತಿಜ್ಞೆ ಬೋಧಿಸಲಾಯಿತು. ಎಲ್ಲ ಸಂಯೋಜಕ ಘಟಕಗಳ ವಿದ್ಯಾರ್ಥಿ ಸ್ವಯಂ ಸೇವಕರು ಉಜಿರೆಯ ಪರಿಸರವನ್ನು ಜಾಥಾ ಹಾಗೂ ಅಭಿಯಾನ ನಡೆಸಿ ಸ್ವಚ್ಛತಾ ಕಾರ್ಯ ಮಾಡಿದರು.

ರಾ. ಸೇ. ಯೋಜನೆಯ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ರೋವರ್ಸ್ ಹಾಗೂ ರೇಂಜರ್ಸ್ ಅಧಿಕಾರಿಗಳಾದ ಲಕ್ಷ್ಮೀಶ ಭಟ್ ಹಾಗೂ ಅಂಕಿತಾ, ರೆಡ್ ಕ್ರಾಸ್ ಸಂಯೋಜಕರಾದ ಅರ್ಚನಾ ಹಾಗೂ ಕವನಶ್ರೀ ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ನಿರೂಪಿಸಿ ವಂದಿಸಿದರು.

Related posts

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಮುಂಡಾಜೆ ಅಂಗನವಾಡಿಗೆ ಲಯನ್ಸ್ ಕ್ಲಬ್ ನಿಂದ ಚಾಪೆ ಕೊಡುಗೆ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕಬಡ್ಡಿ ಮ್ಯಾಟ್ ಹಸ್ತಾಂತರ

Suddi Udaya

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

Suddi Udaya
error: Content is protected !!