ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

ಉಜಿರೆ: ಗಾಂಧೀಜಿ ಮತ್ತು ಶಾಸ್ತ್ರೀಜಿ ಅವರು ಸಾತ್ವಿಕ ಬದುಕು ಹಾಗೂ ಆದರ್ಶಗಳನ್ನು ಮೈಗೂಡಿಸಿಕೊಂಡು ನಾಯಕರಾದವರು. ಅಂತಹ ಮಹಾನ್ ವ್ಯಕ್ತಿಗಳ ಜಯಂತಿಯಂದು ಸ್ವಚ್ಛತಾ ಜಾಥಾ ಹಾಗೂ ಅಭಿಯಾನ ಸ್ತುತ್ಯರ್ಹ. ಪ್ರತಿಯೊಬ್ಬರಲ್ಲೂ ಸ್ವಚ್ಛತೆಯ ಅರಿವು ಹಾಗೂ ಜಾಗೃತಿ ಅಗತ್ಯವಾಗಿದೆ. ನಾವು ಬದಲಾದರೆ ಸಮಾಜ ಹಾಗೂ ದೇಶವೇ ಬದಲಾಗುತ್ತದೆ. ಒಟ್ಟಾರೆ ಸ್ವಚ್ಛ ಪರಿಸರ ಸ್ವಸ್ಥ ಜೀವನಕ್ಕೆ ನಾಂದಿ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ , ರೋವರ್ಸ್ ಹಾಗೂ ರೇಂಜರ್ಸ್ ಮತ್ತು ಜೂನಿಯರ್ ರೆಡ್ ಕ್ರಾಸ್ ಗಳ ಸಹಯೋಗದಲ್ಲಿ ಗಾಂಧೀ ಹಾಗೂ ಶಾಸ್ತ್ರೀ ಜಯಂತಿ ಅಂಗವಾಗಿ ನಡೆದ ಸ್ವಚ್ಛತಾ ಪ್ರತಿಜ್ಞೆ ಹಾಗೂ ಸ್ವಚ್ಛತಾ ಜಾಥಾ ಹಾಗೂ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಗೆ ಸ್ವಚ್ಛತಾ ಪ್ರತಿಜ್ಞೆ ಬೋಧಿಸಲಾಯಿತು. ಎಲ್ಲ ಸಂಯೋಜಕ ಘಟಕಗಳ ವಿದ್ಯಾರ್ಥಿ ಸ್ವಯಂ ಸೇವಕರು ಉಜಿರೆಯ ಪರಿಸರವನ್ನು ಜಾಥಾ ಹಾಗೂ ಅಭಿಯಾನ ನಡೆಸಿ ಸ್ವಚ್ಛತಾ ಕಾರ್ಯ ಮಾಡಿದರು.

ರಾ. ಸೇ. ಯೋಜನೆಯ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ರೋವರ್ಸ್ ಹಾಗೂ ರೇಂಜರ್ಸ್ ಅಧಿಕಾರಿಗಳಾದ ಲಕ್ಷ್ಮೀಶ ಭಟ್ ಹಾಗೂ ಅಂಕಿತಾ, ರೆಡ್ ಕ್ರಾಸ್ ಸಂಯೋಜಕರಾದ ಅರ್ಚನಾ ಹಾಗೂ ಕವನಶ್ರೀ ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ನಿರೂಪಿಸಿ ವಂದಿಸಿದರು.

Related posts

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya
error: Content is protected !!