ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

/05/nisarga-curtain-online-advt-copy.jpg"/>

ನೆಲ್ಯಾಡಿ: ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಅ.2ರಂದು ಸೌತಡ್ಕ ಸೇವಾದಾಮ ಪುನಶ್ವೇತನ ಕೇಂದ್ರದಲ್ಲಿ ಹಣ್ಣುಹಂಪಲು ವಿತರಿಸಲಾಯಿತು.

ಬೆನ್ನು ಮೂಳೆ ಮುರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿ ಶೀಘ್ರದಲ್ಲಿ ಗುಣಮುಖರಾಗಲೆಂದು ಹಾರೈಸಿ ಹಣ್ಣುಹಂಪಲುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್.ಕೆ ದುರ್ಗಾಶ್ರೀ, ಕಾರ್ಯದರ್ಶಿ ಪ್ರಶಾಂತ್.ಸಿ.ಎಚ್, ಉಪಾಧ್ಯಕ್ಷ ಗಣೇಶ್ ರಶ್ಮಿ ಹಾಗೂ ಪದಾಧಿಕಾರಿಗಳಾದ ರಾಜ, ರಾಹುಲ್, ಅಬ್ದುಲ್ ಮುತಾಲಿಬ್, ಥಾಮಸ್, ವಿವಿ ಘಟಕ ಕಾಲೇಜಿನ ಉಪನ್ಯಾಸಕ ಡಾ.ನೂರಂದಪ್ಪ ದಂಪತಿಗಳು ಉಪಸ್ಥಿತರಿದ್ದರು.

Leave a Comment

error: Content is protected !!