July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ: ಗಾಂಧೀಜಿ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ನಾಯಕರು ಗಾಂಧೀಜಿಯವರ ಸಮಯಪ್ರಜ್ಞೆ ಸರಳ ಜೀವನ ಸೇವಾ ಮನೋಭಾವ ಸ್ವಚ್ಛತೆ ನುಡಿದಂತೆ ನಡೆದ ಅವರ ಬದುಕು ನಮಗೆಲ್ಲಾ ಪ್ರಯಾಣ ಈಗ ಪ್ರೇರಣೆಯಾಗಬೇಕು ಎಂದು ನಿವೃತ್ತ ಉಪನ್ಯಾಸಕರು ದ.ಕ ಗಮಕ ಕಲಾ ಪರಿಷತ್ತು ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದರು.

ಮಹಾತ್ಮ ಗಾಂಧೀಜಿಯವರು ನಮ್ಮನ್ನು ಅಗಲಿ ಎಷ್ಟೋ ವರ್ಷಗಳಾದರೂ, ಅವರು ಬಿಟ್ಟುಹೋದ ಆದರ್ಶಗಳು ಇಂದಿಗೂ, ಎಂದೆಂದಿಗೂ ಪ್ರಸ್ತುತ. ನಮ್ಮ ಮೇಲೆ ಗಾಢವಾಗಿ ಪರಿಣಾಮ ಬೀರಿದ ಗಾಂಧಿಜೀಯವರ ಸತ್ಯ, ಅಹಿಂಸೆ, ಶಾಂತಿ ಹಾಗೂ ಸರಳ ಜೀವನ. ಈ ಸಂದೇಶಗಳನ್ನು ಎಲ್ಲರೂ ಪಾಲಿಸಿಬಿಟ್ಟರೆ ಜಗತ್ತಿನ ಎಷ್ಟೋ ಸಮಸ್ಯೆಗಳು ಪರಿಹಾರವಾಗುತ್ತವೆ.
ಇಂದು ನಮಗೆ ಜಗತ್ತಿನಲ್ಲಿ ಶಾಂತಿ ಬೇಕಾಗಿದೆ. ಹಿಂಸೆಯಿಂದ ಸಾಧಿಸುವಂಥದ್ದು ಏನೂ ಇಲ್ಲ. ಶಾಂತಿಯಿಂದಲೇ ಬಗೆಹರಿಸಿಕೊಳ್ಳಬೇಕು. ನಮ್ಮ ಹೋರಾಟ, ಚಳವಳಿಗಳೂ ಅಹಿಂಸಾಮಾರ್ಗದಲ್ಲಿಯೇ ಸಾಗಲಿ ಎಂಬ ಮೇಲ್ಪಂಕ್ತಿ ಹಾಕಿದವರು ಬಾಪೂಜಿ ಎಂದರು.

ಈ ಸಂದರ್ಭದಲ್ಲಿ ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ,ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಸೇವಾದಳದ ಅಧ್ಯಕ್ಷ ಪ್ರದೀಪ್ ಕೆ ಸಿ ಗ್ರಾಮೀಣ ಎಸ್ ಸಿ ಘಟಕದ ಅಧ್ಯಕ್ಷ ನೇಮಿರಾಜ್ ಕಿಲ್ಲೂರು, ಜಿಲ್ಲಾ ಅರೋಗ್ಯ್ರ ರಕ್ಷಾ ಸಮಿತಿಯ ಸದಸ್ಯರಾದ ಅಬ್ದುಲ್‌ ಕರೀಮ್ ಗೇರುಕಟ್ಟೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ವಂದಾನ ಭಂಡಾರಿ ಹಾಗೂ ಸರ್ಕಾರದ ನಾಮನಿರ್ದೇಶಿತ ಸದಸ್ಯರು ,ಪಕ್ಷದ ವಿವಿಧ ಸಮಿತಿಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಅನುಗ್ರಹ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

Suddi Udaya

ಸೌಜನ್ಯಾ ಕೊಲೆ ಪ್ರಕರಣ: ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಡಿ ರಾಂಪುರ್

Suddi Udaya
error: Content is protected !!