April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ : ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿಯನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸಲಾಯಿತು.

ಬೆಳ್ತಂಗಡಿ ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದಲ್ಲದೆ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಮೂಲಕ ಅತ್ಯಂತ ವಿಶಿಷ್ಟವಾಗಿ ಮಹಾತ್ಮ ಗಾಂಧಿ ಜಯಂತಿ ಆಚರಿಸುವ ಮೂಲಕ ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ , ನ್ಯಾಷನಲ್ ಇನ್ಶುರೆನ್ಸ್ ಹಿರಿಯ ಅಭಿವೃದ್ಧಿ ಅಧಿಕಾರಿ ಜಾನ್ ಅರ್ವಿನ್ ಡಿಸೋಜ , ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್.ಎಂ , ಸುಳ್ಯ ಶಾಖೆಯ ನಿವೃತ್ತ ಮೆನೇಜರ್ ಪ್ರಮೋದ್ ಆರ್ ನಾಯಕ್ , ಭಾರತೀಯ ರೆಡ್ ಕ್ರಾಸ್ ಸೊಸೈಟಿ ಪ್ರಧಾನ ಕಾರ್ಯದರ್ಶಿ ಯಶವಂತ ಪಟವರ್ದನ್ , ಹಿರಿಯ ನ್ಯಾಯವಾದಿ , ನಿರ್ದೇಶಕರಾದ ಶಿವಕುಮಾರ್ ಎಸ್ , ಎಂ , ನಿರ್ದೇಶಕರಾದ ನ್ಯಾಯವಾದಿ ಸುಕನ್ಯಾ ಹೆಚ್ , ಉಪನ್ಯಾಸಕ ಸುಜೀತ್ ಉಜಿರೆ ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya
error: Content is protected !!