23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

ಪುತ್ತಿಲ: ಇಲ್ಲಿಯ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಯ 4 ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಹಾಗೂ ಕೇರ್ಯಾ ಸಂಶುಲ್ ಹುದಾ ಜುಮಾ ಅರಬೀಕ್ ಮದರಸದಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಅಲ್ಫಿಯಾ (6 ವರ್ಷ) ಅಸುನಿಗಿದ್ದಾಳೆ.

ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸುವ ಕೆಲಸವನ್ನು ಮಾಡುವುದ್ದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಣೆ ಮಾಡಿದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಅಸುನೀಗಿರುವುದಾಗಿ ತಿಳಿದು ಬಂದಿದೆ.

Related posts

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya
error: Content is protected !!