July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

ಪುತ್ತಿಲ: ಇಲ್ಲಿಯ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಯ 4 ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಹಾಗೂ ಕೇರ್ಯಾ ಸಂಶುಲ್ ಹುದಾ ಜುಮಾ ಅರಬೀಕ್ ಮದರಸದಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಅಲ್ಫಿಯಾ (6 ವರ್ಷ) ಅಸುನಿಗಿದ್ದಾಳೆ.

ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸುವ ಕೆಲಸವನ್ನು ಮಾಡುವುದ್ದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಣೆ ಮಾಡಿದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಅಸುನೀಗಿರುವುದಾಗಿ ತಿಳಿದು ಬಂದಿದೆ.

Related posts

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

Suddi Udaya

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ಬೆಳ್ತಂಗಡಿ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಬಿ. ಭುಜಬಲಿ ಧರ್ಮಸ್ಥಳ

Suddi Udaya
error: Content is protected !!