ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರವನ್ನು ಅ.3 ಹಾಗೂ ಅ.4 ರಂದು ಹಮ್ಮಿಕೊಂಡಿದ್ದು, ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳಾದ ಭವಾನಿ ಶಂಕರ್ ನೆರವೇರಿಸಿದರು.

“ವಿದ್ಯಾರ್ಥಿನಿಲಯದ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ಇಲಾಖೆ ನೀಡುವ ಪ್ರೋತ್ಸಾಹ ಧನದ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಾ ಕೇಸರಿ ಇವರು “ವಿದ್ಯಾರ್ಥಿಗಳು ಶಾಲಾ ಶಿಕ್ಷಕರ ಮಾರ್ಗದರ್ಶನದ ಮೂಲಕ ಸಮಯವನ್ನು ಸದುಪಯೋಗ ಪಡಿಸಿಕೊಂಡು, ಉತ್ತಮ ಫಲಿತಾಂಶ ಪಡೆಯಲು ಕಥೆಯ ಮೂಲಕ ಪ್ರೇರೇಪಿಸಿದರು”.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಚಂದ್ರ ಇವರು ವಹಿಸಿದ್ದರು. ತಾಲೂಕಿನ 6 ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ 93 ವಿದ್ಯಾರ್ಥಿಗಳು ಹಾಗೂ ನಿಲಯ ಮೇಲ್ವಿಚಾರಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ವಾರ್ಡನ್ ಹೇಮಲತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಾರ್ಡನ್ ಡಾ. ಅರ್ಷಿಯ ವಂದಿಸಿದರು.

Related posts

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ

Suddi Udaya
error: Content is protected !!