September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ವೇಣೂರು: ಗಾಂಧಿ ಜಯಂತಿ ಪ್ರಯುಕ್ತ ಭ| ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ವೇಣೂರು ವಲಯ ಅರಣ್ಯ ಇಲಾಖೆ ವತಿಯಿಂದ ಶ್ರೀ ದಿಗಂಬರ ಜೈ ತೀರ್ಥ ಕ್ಷೇತ್ರ ಸಮಿತಿ ವೇಣೂರು ಇವರ ಸಹಭಾಗಿತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಯಾತ್ರಿ ನಿವಾಸದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವೇಣೂರು ವಲಯ ಅರಣ್ಯ ಅಧಿಕಾರಿ ಸುಬ್ರಮಣ್ಯ ಆಚಾರ್ ತಮ್ಮ ಮನೆ ಅಲ್ಲದೆ ತಾವಿರುವ ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.


ಈ ಸಂದರ್ಭದಲ್ಲಿ ಮಹಾಮಸ್ತಕಾಭಿಷೇಕದಲ್ಲಿ ಅರಣ್ಯ ಇಲಾಖೆ ವತಿಯಿಂದ ಇವರು ನೀಡಿದ ಸಹಕಾರವನ್ನು ಸ್ಮರಿಸುತ್ತಾ ಇವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿ ವತಿಯಿಂದ ಕಾರ್ಯದರ್ಶೀಗಳಾದ ವಿ. ಪ್ರವೀಣ್ ಕುಮಾರ್ ಇಂದ್ರ ಸನ್ಮಾನಿಸಿದರು.


ವಲಯದ ಎಲ್ಲ ಉಪ ಅರಣ್ಯಾಧಿಕಾರಿಗಳಾದ ಸುನಿಲ್, ಹರಿಪ್ರಸಾದ್, ಇಬ್ರಾಹಿಂ, ಸುರೇಶ್ ಮತ್ತು ಅರಣ್ಯ ಪಾಲಕರು, ಅರಣ್ಯ ವೀಕ್ಷಕರು ಹಾಗೂ ಸಿಬ್ಬಂದಿಗಳು ಮತ್ತು ತೀರ್ಥಕ್ಷೇತ್ರ ಸಮಿತಿಯ ಸಿಬ್ಬಂದಿಗಳಾದ ವೈ. ಜಯರಾಜ್, ದೀಪಶ್ರೀ ಉಪಸ್ಥಿತರಿದ್ದರು.

ವಿ. ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿ, ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿಯ ಕಾಯ೯ದಶಿ೯ಗಳಾದ ಮಹಾವೀರ್ ಜೈನ್ ಮೂಡುಕೋಡಿ ಗುತ್ತು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ ರವರಿಗೆ ‘ಮಕ್ಕಳ ಸ್ನೇಹಿ ಶಿಕ್ಷಕ’ ಪ್ರಶಸ್ತಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya
error: Content is protected !!