24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

ಪುತ್ತಿಲ: ಇಲ್ಲಿಯ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಯ 4 ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಹಾಗೂ ಕೇರ್ಯಾ ಸಂಶುಲ್ ಹುದಾ ಜುಮಾ ಅರಬೀಕ್ ಮದರಸದಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಅಲ್ಫಿಯಾ (6 ವರ್ಷ) ಅಸುನಿಗಿದ್ದಾಳೆ.

ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸುವ ಕೆಲಸವನ್ನು ಮಾಡುವುದ್ದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಣೆ ಮಾಡಿದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಅಸುನೀಗಿರುವುದಾಗಿ ತಿಳಿದು ಬಂದಿದೆ.

Related posts

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

Suddi Udaya
error: Content is protected !!