22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಅ.02 ರಂದು ನಡೆದ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ವಿಭಾಗದ ಕ್ರೀಡಾಕೂಟದಲ್ಲಿ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಬಹುಮಾನಗಳನ್ನು ಗೆದ್ದು, ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಶಾಲಾ ವಿಭಾಗದಲ್ಲಿ: ಮಹಮ್ಮದ್ ಶಹಾದ್ದೀನ್ (7ನೇ ತರಗತಿ) 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಮಹಮ್ಮದ್ ಮುಝಮಿಲ್ (7ನೇ ತರಗತಿ) 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಅಕ್ಷಾ (7ನೇ ತರಗತಿ) ಗುಂಡೆಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಪ್ರೌಢಶಾಲಾ ವಿಭಾಗದಲ್ಲಿ: ಹೇಮಂತ್ (9ನೇ ತರಗತಿ) ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ, ಅಲೆನ್ (10ನೇ ತರಗತಿ) ಗುಂಡೆಸೆತದಲ್ಲಿ ದ್ವಿತೀಯ ಸ್ಥಾನ., ತೃಷ (8ನೇ ತರಗತಿ) 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಸಾನ್ವಿ (8ನೇ ತರಗತಿ) 600 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಮತ್ತು ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ, ಫಾತಿಮತ್ ಶಜ್ಮ (9ನೇ ತರಗತಿ) ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ, ಧನುಷ್ (10ನೇ ತರಗತಿ) ಜಾವಲಿನ್ ಥ್ರೋ ದ್ವಿತೀಯ ಸ್ಥಾನ, ಕೀರ್ತೇಶ್ (10ನೇ ತರಗತಿ) ಜಾವಲಿನ್ ಥ್ರೋ ದ್ವಿತೀಯ ಸ್ಥಾನ, ಅಲೋನ (10ನೇ ತರಗತಿ) ಗುಂಡೆಸೆತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾದ ವಂದನೀಯ ಫಾ| ಸಬಾಸ್ಟಿಯನ್, ಶಾಲಾ ಮುಖ್ಯಶಿಕ್ಷಕಿ ವಂದನೀಯ ಸಿಸ್ಟರ್ ಶೆರಿನ್, ಮತ್ತು ಶಿಕ್ಷಕ ವೃಂದ ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕ ಪ್ರಜ್ವಲ್ ತರಬೇತಿ ನೀಡಿದ್ದಾರೆ.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

Suddi Udaya

ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ ನಿಧನ

Suddi Udaya

ಬೆಳ್ತಂಗಡಿ ಗ್ರಂಥಾಲಯ ಸಪ್ತಾಹ ಉದ್ಘಾಟನೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya
error: Content is protected !!