27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ವೇಣೂರು: ಗಾಂಧಿ ಜಯಂತಿ ಪ್ರಯುಕ್ತ ಭ| ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ವೇಣೂರು ವಲಯ ಅರಣ್ಯ ಇಲಾಖೆ ವತಿಯಿಂದ ಶ್ರೀ ದಿಗಂಬರ ಜೈ ತೀರ್ಥ ಕ್ಷೇತ್ರ ಸಮಿತಿ ವೇಣೂರು ಇವರ ಸಹಭಾಗಿತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಯಾತ್ರಿ ನಿವಾಸದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವೇಣೂರು ವಲಯ ಅರಣ್ಯ ಅಧಿಕಾರಿ ಸುಬ್ರಮಣ್ಯ ಆಚಾರ್ ತಮ್ಮ ಮನೆ ಅಲ್ಲದೆ ತಾವಿರುವ ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.


ಈ ಸಂದರ್ಭದಲ್ಲಿ ಮಹಾಮಸ್ತಕಾಭಿಷೇಕದಲ್ಲಿ ಅರಣ್ಯ ಇಲಾಖೆ ವತಿಯಿಂದ ಇವರು ನೀಡಿದ ಸಹಕಾರವನ್ನು ಸ್ಮರಿಸುತ್ತಾ ಇವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿ ವತಿಯಿಂದ ಕಾರ್ಯದರ್ಶೀಗಳಾದ ವಿ. ಪ್ರವೀಣ್ ಕುಮಾರ್ ಇಂದ್ರ ಸನ್ಮಾನಿಸಿದರು.


ವಲಯದ ಎಲ್ಲ ಉಪ ಅರಣ್ಯಾಧಿಕಾರಿಗಳಾದ ಸುನಿಲ್, ಹರಿಪ್ರಸಾದ್, ಇಬ್ರಾಹಿಂ, ಸುರೇಶ್ ಮತ್ತು ಅರಣ್ಯ ಪಾಲಕರು, ಅರಣ್ಯ ವೀಕ್ಷಕರು ಹಾಗೂ ಸಿಬ್ಬಂದಿಗಳು ಮತ್ತು ತೀರ್ಥಕ್ಷೇತ್ರ ಸಮಿತಿಯ ಸಿಬ್ಬಂದಿಗಳಾದ ವೈ. ಜಯರಾಜ್, ದೀಪಶ್ರೀ ಉಪಸ್ಥಿತರಿದ್ದರು.

ವಿ. ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿ, ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿಯ ಕಾಯ೯ದಶಿ೯ಗಳಾದ ಮಹಾವೀರ್ ಜೈನ್ ಮೂಡುಕೋಡಿ ಗುತ್ತು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್‌ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯುಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!