27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

ಬೆಳ್ತಂಗಡಿ : ಜೆಸಿಐ ಭಾರತದ ಇತಿಹಾಸದಲ್ಲಿ ವಲಯ 15 ಹಮ್ಮಿಕೊಂಡ ಪ್ರಪ್ರಥಮ ತರಬೇತಿ ಸಮ್ಮೇಳನವು ಉಡುಪಿಯ ಜೆಸಿ ಶಂಕರಪುರದಲ್ಲಿ ನಡೆಯಿತು.

ಈ ವರುಷ ಶಾಲಾ ಕಾಲೇಜುಗಳಲ್ಲಿ, ಸಂಘ-ಸಂಸ್ಥೆಗಳಲ್ಲಿ ಹಾಗೂ ಘಟಕದಲ್ಲಿ ಹಮ್ಮಿಕೊಂಡ ಹಲವಾರು ತರಬೇತಿ ಕಾರ್ಯಕ್ರಮಗಳು ಹಾಗೂ ವಲಯವು ಮೊದಲ ಬಾರಿಗೆ ಆಯೋಜಿಸಿದ ಶ್ರಾವಣ ತರಬೇತಿ ಸಪ್ತಾಹ ಕಾರ್ಯಕ್ರಮವನ್ನು ನಡೆಸಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕಕ್ಕೆ ತರಬೇತಿ ಸಮ್ಮೇಳನದಲ್ಲಿ ವಲಯದ ಐದನೇ ಅತ್ಯುತ್ತಮ ಘಟಕ ಪ್ರಶಸ್ತಿಯು ಲಭಿಸಿತು.

ಸಮೇಳನದಲ್ಲಿ ನಡೆದ ಭಾಷಣ ಸ್ಪರ್ಧೆಗಳಲ್ಲಿ ಜೆಸಿ ವಿಭಾಗದಲ್ಲಿ ಘಟಕದ ಉಪಾಧ್ಯಕ್ಷರಾದ ಚಂದ್ರಹಾಸ್ ಬಳಂಜ ಪ್ರಥಮ ಸ್ಥಾನವನ್ನು, ಜೆಜೆಸಿ ವಿಭಾಗದಲ್ಲಿ ನೇವಿಲ್ ರವರು ದ್ವಿತೀಯ ಸ್ಥಾನವನ್ನು, ಬ್ಯಾನರ್ ಸ್ಪರ್ಧೆಯಲ್ಲಿ ಬೆಳ್ತಂಗಡಿ ಘಟಕವು ಪ್ರಥಮ ಸ್ಥಾನವನ್ನು ಪಡೆಯಿತು.

ರಾಷ್ಟ್ರೀಯ ತರಬೇತಿ ದಿನ, ಎಫೆಕ್ಟಿವ್ ಪಬ್ಲಿಕ್ ಸ್ಪೀಕಿಂಗ್, ನಾಯಕತ್ವ ತರಬೇತಿ ಶಿಬಿರ, ಜೆಸಿಐ ಭಾರತದ ಅಮೃತ ಮಹೋತ್ಸವದ ಪ್ರಯುಕ್ತ ನಡೆದ ತರಬೇತಿ ಕಾರ್ಯಕ್ರಮಗಳು, ಜೆಜೆಸಿ ಸಪ್ತಾಹದಲ್ಲಿ ನಡೆಸಿದ ಸ್ಕಿಲ್ ಡೆವಲಪ್ಮೆಂಟ್ ತರಬೇತಿ, ಹೊಸ ಸದಸ್ಯರಿಗೆ ನಡೆಸಿದ ತರಬೇತಿ ವಿಭಾಗಕ್ಕೆ ವಿಶೇಷ ಮನ್ನಣೆಯನ್ನು ಬೆಳ್ತಂಗಡಿ ಘಟಕವು ಪಡೆಯಿತು.

ಕಾರ್ಯಕ್ರಮದಲ್ಲಿ ವಲಯ ಅಧ್ಯಕ್ಷರಾದ ಗಿರೀಶ್ ಎಸ್ ಪಿ, ಕಾರ್ಯದರ್ಶಿಗಳಾದ ಸೌಮ್ಯ ರಾಕೇಶ್, ವಲಯದ ಉಪಾಧ್ಯಕ್ಷರುಗಳು, ಬೆಳ್ತಂಗಡಿ ಘಟಕದ ಕಾರ್ಯದರ್ಶಿಗಳಾದ ಅನುದೀಪ್ ಜೈನ್, ಲೇಡಿ ಜೇಸಿ ಸಂಯೋಜಕರಾದ ಶ್ರುತಿ ರಂಜಿತ್ ಉಪಸ್ಥಿತರಿದ್ದರು.

Related posts

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

Suddi Udaya

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya
error: Content is protected !!