22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

ಬೆಳ್ತಂಗಡಿ : ಜೆಸಿಐ ಭಾರತದ ಇತಿಹಾಸದಲ್ಲಿ ವಲಯ 15 ಹಮ್ಮಿಕೊಂಡ ಪ್ರಪ್ರಥಮ ತರಬೇತಿ ಸಮ್ಮೇಳನವು ಉಡುಪಿಯ ಜೆಸಿ ಶಂಕರಪುರದಲ್ಲಿ ನಡೆಯಿತು.

ಈ ವರುಷ ಶಾಲಾ ಕಾಲೇಜುಗಳಲ್ಲಿ, ಸಂಘ-ಸಂಸ್ಥೆಗಳಲ್ಲಿ ಹಾಗೂ ಘಟಕದಲ್ಲಿ ಹಮ್ಮಿಕೊಂಡ ಹಲವಾರು ತರಬೇತಿ ಕಾರ್ಯಕ್ರಮಗಳು ಹಾಗೂ ವಲಯವು ಮೊದಲ ಬಾರಿಗೆ ಆಯೋಜಿಸಿದ ಶ್ರಾವಣ ತರಬೇತಿ ಸಪ್ತಾಹ ಕಾರ್ಯಕ್ರಮವನ್ನು ನಡೆಸಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕಕ್ಕೆ ತರಬೇತಿ ಸಮ್ಮೇಳನದಲ್ಲಿ ವಲಯದ ಐದನೇ ಅತ್ಯುತ್ತಮ ಘಟಕ ಪ್ರಶಸ್ತಿಯು ಲಭಿಸಿತು.

ಸಮೇಳನದಲ್ಲಿ ನಡೆದ ಭಾಷಣ ಸ್ಪರ್ಧೆಗಳಲ್ಲಿ ಜೆಸಿ ವಿಭಾಗದಲ್ಲಿ ಘಟಕದ ಉಪಾಧ್ಯಕ್ಷರಾದ ಚಂದ್ರಹಾಸ್ ಬಳಂಜ ಪ್ರಥಮ ಸ್ಥಾನವನ್ನು, ಜೆಜೆಸಿ ವಿಭಾಗದಲ್ಲಿ ನೇವಿಲ್ ರವರು ದ್ವಿತೀಯ ಸ್ಥಾನವನ್ನು, ಬ್ಯಾನರ್ ಸ್ಪರ್ಧೆಯಲ್ಲಿ ಬೆಳ್ತಂಗಡಿ ಘಟಕವು ಪ್ರಥಮ ಸ್ಥಾನವನ್ನು ಪಡೆಯಿತು.

ರಾಷ್ಟ್ರೀಯ ತರಬೇತಿ ದಿನ, ಎಫೆಕ್ಟಿವ್ ಪಬ್ಲಿಕ್ ಸ್ಪೀಕಿಂಗ್, ನಾಯಕತ್ವ ತರಬೇತಿ ಶಿಬಿರ, ಜೆಸಿಐ ಭಾರತದ ಅಮೃತ ಮಹೋತ್ಸವದ ಪ್ರಯುಕ್ತ ನಡೆದ ತರಬೇತಿ ಕಾರ್ಯಕ್ರಮಗಳು, ಜೆಜೆಸಿ ಸಪ್ತಾಹದಲ್ಲಿ ನಡೆಸಿದ ಸ್ಕಿಲ್ ಡೆವಲಪ್ಮೆಂಟ್ ತರಬೇತಿ, ಹೊಸ ಸದಸ್ಯರಿಗೆ ನಡೆಸಿದ ತರಬೇತಿ ವಿಭಾಗಕ್ಕೆ ವಿಶೇಷ ಮನ್ನಣೆಯನ್ನು ಬೆಳ್ತಂಗಡಿ ಘಟಕವು ಪಡೆಯಿತು.

ಕಾರ್ಯಕ್ರಮದಲ್ಲಿ ವಲಯ ಅಧ್ಯಕ್ಷರಾದ ಗಿರೀಶ್ ಎಸ್ ಪಿ, ಕಾರ್ಯದರ್ಶಿಗಳಾದ ಸೌಮ್ಯ ರಾಕೇಶ್, ವಲಯದ ಉಪಾಧ್ಯಕ್ಷರುಗಳು, ಬೆಳ್ತಂಗಡಿ ಘಟಕದ ಕಾರ್ಯದರ್ಶಿಗಳಾದ ಅನುದೀಪ್ ಜೈನ್, ಲೇಡಿ ಜೇಸಿ ಸಂಯೋಜಕರಾದ ಶ್ರುತಿ ರಂಜಿತ್ ಉಪಸ್ಥಿತರಿದ್ದರು.

Related posts

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸೋಣಂದೂರು: ಪೊಮ್ಮಾಜೆ ಜನರಿಗೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾದ ಏರ್‌ಟೆಲ್ ಹಾಗೂ ಬಿಎಸ್‌ಎನ್‌ಎಲ್ ಟವರ್

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya
error: Content is protected !!