22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ವೇಣೂರು: ಗಾಂಧಿ ಜಯಂತಿ ಪ್ರಯುಕ್ತ ಭ| ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ವೇಣೂರು ವಲಯ ಅರಣ್ಯ ಇಲಾಖೆ ವತಿಯಿಂದ ಶ್ರೀ ದಿಗಂಬರ ಜೈ ತೀರ್ಥ ಕ್ಷೇತ್ರ ಸಮಿತಿ ವೇಣೂರು ಇವರ ಸಹಭಾಗಿತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಯಾತ್ರಿ ನಿವಾಸದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವೇಣೂರು ವಲಯ ಅರಣ್ಯ ಅಧಿಕಾರಿ ಸುಬ್ರಮಣ್ಯ ಆಚಾರ್ ತಮ್ಮ ಮನೆ ಅಲ್ಲದೆ ತಾವಿರುವ ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.


ಈ ಸಂದರ್ಭದಲ್ಲಿ ಮಹಾಮಸ್ತಕಾಭಿಷೇಕದಲ್ಲಿ ಅರಣ್ಯ ಇಲಾಖೆ ವತಿಯಿಂದ ಇವರು ನೀಡಿದ ಸಹಕಾರವನ್ನು ಸ್ಮರಿಸುತ್ತಾ ಇವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿ ವತಿಯಿಂದ ಕಾರ್ಯದರ್ಶೀಗಳಾದ ವಿ. ಪ್ರವೀಣ್ ಕುಮಾರ್ ಇಂದ್ರ ಸನ್ಮಾನಿಸಿದರು.


ವಲಯದ ಎಲ್ಲ ಉಪ ಅರಣ್ಯಾಧಿಕಾರಿಗಳಾದ ಸುನಿಲ್, ಹರಿಪ್ರಸಾದ್, ಇಬ್ರಾಹಿಂ, ಸುರೇಶ್ ಮತ್ತು ಅರಣ್ಯ ಪಾಲಕರು, ಅರಣ್ಯ ವೀಕ್ಷಕರು ಹಾಗೂ ಸಿಬ್ಬಂದಿಗಳು ಮತ್ತು ತೀರ್ಥಕ್ಷೇತ್ರ ಸಮಿತಿಯ ಸಿಬ್ಬಂದಿಗಳಾದ ವೈ. ಜಯರಾಜ್, ದೀಪಶ್ರೀ ಉಪಸ್ಥಿತರಿದ್ದರು.

ವಿ. ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿ, ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿಯ ಕಾಯ೯ದಶಿ೯ಗಳಾದ ಮಹಾವೀರ್ ಜೈನ್ ಮೂಡುಕೋಡಿ ಗುತ್ತು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೈಡ್ರಾ ಫೇಶಿಯಲ್ ಸೆಮಿನಾರ್

Suddi Udaya
error: Content is protected !!