23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ಮಲವಂತಿಗೆ : ಮಲವಂತಿಗೆ ಗ್ರಾಮದ ಏಳನೀರು ಹೋಗುವ ರಸ್ತೆಯ ಮುಖಾಂತರ 5 ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೇ ಎರಡು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಮುರಳಿಧರನಾಯ್ಕ ಕೆ ಜಿ , ಪೊಲೀಸ್ ಉಪನಿರೀಕ್ಷಕರು (ಕಾ&ಸು) ಬೆಳ್ತಂಗಡಿ ಪೊಲೀಸ್ ಠಾಣೆ ಬೆಳ್ತಂಗಡಿರವರು ಠಾಣಾ ಸಿಬ್ಬಂದಿಗಳೊಂದಿಗೆ 2 ಪಿಕಪ್ ವಾಹನಗಳನ್ನು ಅ.03ರಂದು ರಾತ್ರಿ ತಡೆಹಿಡಿದು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಅಕ್ರಮವಾಗಿ ಗುತ್ಯಾಡ್ಕದಿಂದ ದಿಡುಪೆ ರಸ್ತೆ ಮೂಲಕ ವಾಹನ ಒಂದರಲ್ಲಿ 2 ಗೋವು, ಮತ್ತೊಂದು ವಾಹನದಲ್ಲಿ 3 ಗೋವುಗಳನ್ನು ಹಿಂಸಾತ್ಮಕವಾಗಿ ತುಂಬಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ವಾಹನದಲ್ಲಿದ್ದ ಆಪಾದಿತರುಗಳ ಬಳಿ ವಿಚಾರಿಸಲಾಗಿ ಅವರುಗಳು ಯಾವುದೇ ಪರವಾನಿಗೆ ಇಲ್ಲದೇ ಜಾನುವಾರುಗಳನ್ನು ಮಾಂಸಮಾಡುವ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿರುತ್ತದೆ.

ಈ ಬಗ್ಗೆ ಮುಂದಿನ ಕಾನೂನುಕ್ರಮಕ್ಕಾಗಿ 02 ಪಿಕಪ್ ವಾಹನಗಳನ್ನು ಹಾಗೂ 05 ಜಾನುವಾರುಗಳನ್ನು ಮತ್ತು ಆರೋಪಿಗಳಾದ ಚಿಬಿದ್ರೆ ನಿವಾಸಿ ಯತೀಂದ್ರ (24) ,ಚಾರ್ಮಾಡಿ ನಿವಾಸಿ ಉಸ್ಮಾನ್ (36), ತೊಟತ್ತಾಡಿ ನಿವಾಸಿ ಅರವಿಂದ (30), ಚಿಬಿದ್ರೆ ನಿವಾಸಿ ಆರೀಫ್ (27) ಎಂಬವರುಗಳನ್ನು ವಶಕ್ಕೆ ಪಡೆದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 84/2024 ಕಲಂ 5,7,12 ಕರ್ನಾಟಕ ಜಾನುವಾರು ಪ್ರತಿಬಂಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಆದ್ಯಾದೇಶ 2020 ಮತ್ತು ಕಲಂ 11(ಡಿ) ಪ್ರಾಣಿ ಹಿಂಸೆ ತಡೆಕಾಯಿದೆ 1960 ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಆರಂಬೋಡಿ : ಪಿಲ್ಲಂಬುಗೋಳಿ ಕಾಂತರಬೆಟ್ಟು ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!