September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ಮಲವಂತಿಗೆ : ಮಲವಂತಿಗೆ ಗ್ರಾಮದ ಏಳನೀರು ಹೋಗುವ ರಸ್ತೆಯ ಮುಖಾಂತರ 5 ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೇ ಎರಡು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಮುರಳಿಧರನಾಯ್ಕ ಕೆ ಜಿ , ಪೊಲೀಸ್ ಉಪನಿರೀಕ್ಷಕರು (ಕಾ&ಸು) ಬೆಳ್ತಂಗಡಿ ಪೊಲೀಸ್ ಠಾಣೆ ಬೆಳ್ತಂಗಡಿರವರು ಠಾಣಾ ಸಿಬ್ಬಂದಿಗಳೊಂದಿಗೆ 2 ಪಿಕಪ್ ವಾಹನಗಳನ್ನು ಅ.03ರಂದು ರಾತ್ರಿ ತಡೆಹಿಡಿದು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಅಕ್ರಮವಾಗಿ ಗುತ್ಯಾಡ್ಕದಿಂದ ದಿಡುಪೆ ರಸ್ತೆ ಮೂಲಕ ವಾಹನ ಒಂದರಲ್ಲಿ 2 ಗೋವು, ಮತ್ತೊಂದು ವಾಹನದಲ್ಲಿ 3 ಗೋವುಗಳನ್ನು ಹಿಂಸಾತ್ಮಕವಾಗಿ ತುಂಬಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ವಾಹನದಲ್ಲಿದ್ದ ಆಪಾದಿತರುಗಳ ಬಳಿ ವಿಚಾರಿಸಲಾಗಿ ಅವರುಗಳು ಯಾವುದೇ ಪರವಾನಿಗೆ ಇಲ್ಲದೇ ಜಾನುವಾರುಗಳನ್ನು ಮಾಂಸಮಾಡುವ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿರುತ್ತದೆ.

ಈ ಬಗ್ಗೆ ಮುಂದಿನ ಕಾನೂನುಕ್ರಮಕ್ಕಾಗಿ 02 ಪಿಕಪ್ ವಾಹನಗಳನ್ನು ಹಾಗೂ 05 ಜಾನುವಾರುಗಳನ್ನು ಮತ್ತು ಆರೋಪಿಗಳಾದ ಚಿಬಿದ್ರೆ ನಿವಾಸಿ ಯತೀಂದ್ರ (24) ,ಚಾರ್ಮಾಡಿ ನಿವಾಸಿ ಉಸ್ಮಾನ್ (36), ತೊಟತ್ತಾಡಿ ನಿವಾಸಿ ಅರವಿಂದ (30), ಚಿಬಿದ್ರೆ ನಿವಾಸಿ ಆರೀಫ್ (27) ಎಂಬವರುಗಳನ್ನು ವಶಕ್ಕೆ ಪಡೆದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 84/2024 ಕಲಂ 5,7,12 ಕರ್ನಾಟಕ ಜಾನುವಾರು ಪ್ರತಿಬಂಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಆದ್ಯಾದೇಶ 2020 ಮತ್ತು ಕಲಂ 11(ಡಿ) ಪ್ರಾಣಿ ಹಿಂಸೆ ತಡೆಕಾಯಿದೆ 1960 ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗಿದಾಗ ನಾಲ್ಕೂರು ಬೊಕ್ಕಸ ಬಳಿ ಬೈಕ್ ಸ್ಕಿಡ್ : ಗಂಭೀರ ಗಾಯಗೊಂಡ ಮಹಿಳೆ ಸಾವು

Suddi Udaya

ಪಟ್ರಮೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!