22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

ಕೊಕ್ಕಡ ಕರ್ನಾಟಕ ಸರಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು,ಮಂಗಳೂರು ಕಿನ್ನಿಕಂಬಳ ರೋಸಾ ಮಿಸ್ತಿಕ ಪ.ಪೂ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಅ.3ರಂದು ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾ ಸಭಾಭವನದಲ್ಲಿ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮತ್ತು ಉದ್ಘಾಟನೆಯನ್ನು ಮಂಗಳೂರು ಬೆಥನಿ ಪ್ರಾಂತ್ಯಾಧಿಕಾರಿಣಿ ಲಿಲ್ಲಿ ಪಿರೇರ.ಬಿ.ಎಸ್ ಅವರು ನಡೆಸಿಕೊಟ್ಟರು. ಸಂತ ಜೋನರ ದೇವಾಲಯ ಧರ್ಮಗುರು ಫಾ.ಅನಿಲ್ ಪ್ರಕಾಶ್ ಡಿಸಿಲ್ವ ಅವರು ಆಶೀರ್ವಚನ ನೀಡಿದರು.

ಅತಿಥಿಗಳಾಗಿ ಸಂತ ಜೋನರ ಹಿ.ಪ್ರಾ. ಶಾಲೆ ಮುಖ್ಯಶಿಕ್ಷಕಿ ಜೆನೆವಿವ್ ಫೆರ್ನಾಂಡೀಸ್,ಕೊಕ್ಕಡ ಕಪಿಲ ಅಧ್ಯಕ್ಷ ಸಂತೋಷ್ ಜೈನ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಉಮೇಶ್, ಕೊಕ್ಕಡ ಸಂತ ಜೋನರ ದೇವಾಲಯ ಪಾಲನಾ ಸಮಿತಿ ಉಪಾಧ್ಯಕ್ಷ ನೋಯೆಲ್ ಮೊಂತೇರೊ, ಕಾರ್ಯದರ್ಶಿ ವೀಣಾ, ಮಿಸ್ತಿಕ ಪ.ಪೂ ಕಾಲೇಜು ಸಂಚಾಲಕಿ ರೋಸ್ ಲೀಟಾ.ಬಿ.ಎಸ್ , ರೋಸಾ ಮಿಸ್ತಿಕಾ ಪ.ಪೂ ಕಾಲೇಜು ಪ್ರಾಚಾರ್ಯ ಡಾ.ಸಾಧನಾ ಬಿ.ಎಸ್ ಉಪಸ್ಥಿತರಿದ್ದರು.

ಕೌಕ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೆಶ್ ಬಾಣಜಾಲು ಅವರು ಶುಭ ಹಾರೈಸಿದರು. ಸದಸ್ಯ ಮಹೇಶ್ ಉಪಸ್ಥಿತರಿದ್ದರು. ಅ.3ರಿಂದ ಅ.9ರವರೆಗೆ ನಡೆಯುವ ಎನ್ ಎಸ್ ಎಸ್ ಶಿಬಿರದಲ್ಲಿ 51 ಶಿಬಿರಾರ್ಥಿಗಳು ಭಾಗವಹಿಸುತ್ತಾರೆ. ಡಾ.ಸಾಧನಾ ಸ್ವಾಗತಿಸಿದರು, ಸಹಶಿಬಿರಾಧಿಕಾರಿ ಆ್ಯ ಮ್ಸಿ ಲ್ ಫೆರ್ನಾಂಡೀಸ್ ವಂದಿಸಿದರು. ಶಿಬಿರಾಧಿಕಾರಿ ಅವಿಲ್ ರೆನಿಲ್ ಡಿಸಿಲ್ವಾ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳು, ಪೋಷಕರು, ಊರ ನಾಗರಿಕರು ಭಾಗವಹಿಸಿದರು.

Related posts

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!