23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

ಕೊಕ್ಕಡ ಕರ್ನಾಟಕ ಸರಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು,ಮಂಗಳೂರು ಕಿನ್ನಿಕಂಬಳ ರೋಸಾ ಮಿಸ್ತಿಕ ಪ.ಪೂ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಅ.3ರಂದು ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾ ಸಭಾಭವನದಲ್ಲಿ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮತ್ತು ಉದ್ಘಾಟನೆಯನ್ನು ಮಂಗಳೂರು ಬೆಥನಿ ಪ್ರಾಂತ್ಯಾಧಿಕಾರಿಣಿ ಲಿಲ್ಲಿ ಪಿರೇರ.ಬಿ.ಎಸ್ ಅವರು ನಡೆಸಿಕೊಟ್ಟರು. ಸಂತ ಜೋನರ ದೇವಾಲಯ ಧರ್ಮಗುರು ಫಾ.ಅನಿಲ್ ಪ್ರಕಾಶ್ ಡಿಸಿಲ್ವ ಅವರು ಆಶೀರ್ವಚನ ನೀಡಿದರು.

ಅತಿಥಿಗಳಾಗಿ ಸಂತ ಜೋನರ ಹಿ.ಪ್ರಾ. ಶಾಲೆ ಮುಖ್ಯಶಿಕ್ಷಕಿ ಜೆನೆವಿವ್ ಫೆರ್ನಾಂಡೀಸ್,ಕೊಕ್ಕಡ ಕಪಿಲ ಅಧ್ಯಕ್ಷ ಸಂತೋಷ್ ಜೈನ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಉಮೇಶ್, ಕೊಕ್ಕಡ ಸಂತ ಜೋನರ ದೇವಾಲಯ ಪಾಲನಾ ಸಮಿತಿ ಉಪಾಧ್ಯಕ್ಷ ನೋಯೆಲ್ ಮೊಂತೇರೊ, ಕಾರ್ಯದರ್ಶಿ ವೀಣಾ, ಮಿಸ್ತಿಕ ಪ.ಪೂ ಕಾಲೇಜು ಸಂಚಾಲಕಿ ರೋಸ್ ಲೀಟಾ.ಬಿ.ಎಸ್ , ರೋಸಾ ಮಿಸ್ತಿಕಾ ಪ.ಪೂ ಕಾಲೇಜು ಪ್ರಾಚಾರ್ಯ ಡಾ.ಸಾಧನಾ ಬಿ.ಎಸ್ ಉಪಸ್ಥಿತರಿದ್ದರು.

ಕೌಕ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೆಶ್ ಬಾಣಜಾಲು ಅವರು ಶುಭ ಹಾರೈಸಿದರು. ಸದಸ್ಯ ಮಹೇಶ್ ಉಪಸ್ಥಿತರಿದ್ದರು. ಅ.3ರಿಂದ ಅ.9ರವರೆಗೆ ನಡೆಯುವ ಎನ್ ಎಸ್ ಎಸ್ ಶಿಬಿರದಲ್ಲಿ 51 ಶಿಬಿರಾರ್ಥಿಗಳು ಭಾಗವಹಿಸುತ್ತಾರೆ. ಡಾ.ಸಾಧನಾ ಸ್ವಾಗತಿಸಿದರು, ಸಹಶಿಬಿರಾಧಿಕಾರಿ ಆ್ಯ ಮ್ಸಿ ಲ್ ಫೆರ್ನಾಂಡೀಸ್ ವಂದಿಸಿದರು. ಶಿಬಿರಾಧಿಕಾರಿ ಅವಿಲ್ ರೆನಿಲ್ ಡಿಸಿಲ್ವಾ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳು, ಪೋಷಕರು, ಊರ ನಾಗರಿಕರು ಭಾಗವಹಿಸಿದರು.

Related posts

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮಹಾವೀರ ಜಯಂತಿ ರಜೆ ಹಿನ್ನಲೆ ಮಾ.30ರಂದು ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

Suddi Udaya

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya
error: Content is protected !!