23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕ ೧ ಮತ್ತು ೨ , ಯೂತ್ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಇದರ ಜಂಟಿ ಆಶ್ರಯದಲ್ಲಿ”ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಷಯದ ಮೇಲೆ ವಿಶೇಷ ಉಪನ್ಯಾಸವನ್ನು ಸೆ.28 ರಂದುಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರಿನ ಹಿರಿಯ ವೈದ್ಯಾಧಿಕಾರಿ ಡಾ.ಎಂ. ಅಣ್ಣಯ್ಯ ಕುಲಾಲ್ ಉಳ್ತುರ್ ಅವರು ಜೀವನದಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಮತ್ತು ಆರೋಗ್ಯಕ್ಕೆ ಪೂರಕವಾದ ಪೋಷಕಾಂಶಯುಕ್ತ ಯುಕ್ತ ಆಹಾರ ಪದಾರ್ಥಗಳನ್ನು, ತರಕಾರಿ, ಹಣ್ಣು ತಿನ್ನಬೇಕು ಮತ್ತು ನಮ್ಮ ಆರೋಗ್ಯಕ್ಕೆ ಬೇಕಾದ ಆಹಾರ ಗಳನ್ನು ಹೇಗೆ ಉಪಯೋಗಿಸಬೇಕು ಎಂಬ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಮಾಧವರವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಐಕ್ಯೂ ಎಸಿ ಸಂಚಾಲಕರಾದ ಡಾ. ಅವಿತ ಮರಿಯ ಕ್ವಾಡ್ರಸ್, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಪ್ರೊ. ಚಿತ್ರಾ ಪಡಿಯಾರ್ ಮತ್ತು ಪ್ರೊ. ಸಂತೋಷ್ ಪ್ರಭು, ಯೂತ್ ರೆಡ್ ಕ್ರಾಸ್‌ನ ಡಾ. ವೈಶಾಲಿ ಯು ಮತ್ತು ಪ್ರೊ| ಶೇಖರ್ ಕೆ, ರೋವರ್ಸ್ ಮತ್ತು ರೇಂಜರ್ಸ್ ನ ಸಂಯೋಜಕ ಡಾ. ಪ್ರೀತಿ ಕೆ ರಾವ್ ಮತ್ತು ಪ್ರೊ|ಆಂಜನೇಯ ಎಂ ಎನ್ ಉಪಸ್ಥಿತರಿದ್ದರು.
ಕು| ಏಕಿತ ಸಂನನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಜಿತೇಶ್ ಸ್ವಾಗತಿಸಿದರು, ಕು|ದಿವ್ಯಾ ವಂದಿಸಿದರು ಕು| ಯೋಗಿತಾ ನಿರೂಪಿಸಿದರು.

Related posts

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ

Suddi Udaya

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Suddi Udaya

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ವ್ಯವಹಾರ ಆಡಳಿತ ಆಯೋಜಿಸಿದ್ದ ‘ಏಕತ್ವಮ್’ ಅಂತರ್ ತರಗತಿ ಫೆಸ್ಟ್ ನ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya
error: Content is protected !!