25 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ವಿದ್ಯಾರ್ಥಿ ಜೀವನದಲ್ಲಿ ಸೇವಾ ಮನೋಭಾವ, ಶಿಸ್ತು, ಸಮಯ ಪಾಲನೆ ಹಾಗೂ ಕೂಡಿ ಬಾಳುವ ಮನೋಭಾವ ಬೆಳೆಸಿಕೊಳ್ಳಲು ಎನ್‌ಎಸ್‌ಎಸ್‌ ಶಿಬಿರಗಳು ಸಹಾಯಕಾರಿಯಾಗಿವೆ ಎಂದು ಮುಂಡಾಜೆಯ ಶತಾಬ್ದಿ ವಿದ್ಯಾಲಯ ಸಮಿತಿ ಸಂಚಾಲಕ ನಾರಾಯಣ ಫಡ್ಕೆ ಹೇಳಿದರು.


ಚಿಬಿದ್ರೆ ಗ್ರಾಮದ ಪೆರಿಯಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಕಾಲೇಜಿನ ಪ್ರಾಂಶುಪಾಲೆ ಜಾಲಿ ಓ.ಎ. ಅವರು ಅಧ್ಯಕ್ಷತೆ ವಹಿಸಿದ್ದರು.
ತೋಟತ್ತಾಡಿ ಸೇಂಟ್ ಆಂಟನೀಸ್‌ ಚರ್ಚ್‌ದ ಧರ್ಮಗುರು ಫಾ.ಜೋಸ್ ಪೂವತ್ತಿಂಗಳ್ ಆಶೀರ್ವಚನ ನೀಡಿದರು.
ಚಾರ್ಮಾಡಿಯ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಹೊಸ್ಮಠ, ಪೆರಿಯಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮೇರಿ ವಿ ವಿ, ಕುಡುಮಡ್ಕ ಅನ್ನಪೂರ್ಣೇಶ್ವರಿ ಕ್ಷೇತ್ರದ ಆಡಳಿತ ಮೊಕ್ತೇಸರ ರಾಘವ ಗೌಡ ಕುಡುಮಡ್ಕ, ಶಿಬಿರ ನಿರ್ವಹಣಾ ಸಮಿತಿ ಅಧ್ಯಕ್ಷ ಸೋಮನಾಥ ಗೌಡ ಭಾಗವಹಿಸಿದ್ದರು.


ಎನ್ಎಸ್ಎಸ್ ಶಿಭಿರಾಧಿಕಾರಿ ನಮಿತಾ ಕೆ.ಆರ್.ಸ್ವಾಗತಿಸಿ, ಸಂಖ್ಯಾಶಾಸ್ತ್ರ ಉಪನ್ಯಾಸಕಿ ವಿದ್ಯಾ ರಾವ್ ವಂದಿಸಿದರು. ಕನ್ನಡ ಉಪನ್ಯಾಸಕಿ ವಸಂತಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

Suddi Udaya
error: Content is protected !!