April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ಮಲವಂತಿಗೆ : ಮಲವಂತಿಗೆ ಗ್ರಾಮದ ಏಳನೀರು ಹೋಗುವ ರಸ್ತೆಯ ಮುಖಾಂತರ 5 ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೇ ಎರಡು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಮುರಳಿಧರನಾಯ್ಕ ಕೆ ಜಿ , ಪೊಲೀಸ್ ಉಪನಿರೀಕ್ಷಕರು (ಕಾ&ಸು) ಬೆಳ್ತಂಗಡಿ ಪೊಲೀಸ್ ಠಾಣೆ ಬೆಳ್ತಂಗಡಿರವರು ಠಾಣಾ ಸಿಬ್ಬಂದಿಗಳೊಂದಿಗೆ 2 ಪಿಕಪ್ ವಾಹನಗಳನ್ನು ಅ.03ರಂದು ರಾತ್ರಿ ತಡೆಹಿಡಿದು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಅಕ್ರಮವಾಗಿ ಗುತ್ಯಾಡ್ಕದಿಂದ ದಿಡುಪೆ ರಸ್ತೆ ಮೂಲಕ ವಾಹನ ಒಂದರಲ್ಲಿ 2 ಗೋವು, ಮತ್ತೊಂದು ವಾಹನದಲ್ಲಿ 3 ಗೋವುಗಳನ್ನು ಹಿಂಸಾತ್ಮಕವಾಗಿ ತುಂಬಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ವಾಹನದಲ್ಲಿದ್ದ ಆಪಾದಿತರುಗಳ ಬಳಿ ವಿಚಾರಿಸಲಾಗಿ ಅವರುಗಳು ಯಾವುದೇ ಪರವಾನಿಗೆ ಇಲ್ಲದೇ ಜಾನುವಾರುಗಳನ್ನು ಮಾಂಸಮಾಡುವ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿರುತ್ತದೆ.

ಈ ಬಗ್ಗೆ ಮುಂದಿನ ಕಾನೂನುಕ್ರಮಕ್ಕಾಗಿ 02 ಪಿಕಪ್ ವಾಹನಗಳನ್ನು ಹಾಗೂ 05 ಜಾನುವಾರುಗಳನ್ನು ಮತ್ತು ಆರೋಪಿಗಳಾದ ಚಿಬಿದ್ರೆ ನಿವಾಸಿ ಯತೀಂದ್ರ (24) ,ಚಾರ್ಮಾಡಿ ನಿವಾಸಿ ಉಸ್ಮಾನ್ (36), ತೊಟತ್ತಾಡಿ ನಿವಾಸಿ ಅರವಿಂದ (30), ಚಿಬಿದ್ರೆ ನಿವಾಸಿ ಆರೀಫ್ (27) ಎಂಬವರುಗಳನ್ನು ವಶಕ್ಕೆ ಪಡೆದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 84/2024 ಕಲಂ 5,7,12 ಕರ್ನಾಟಕ ಜಾನುವಾರು ಪ್ರತಿಬಂಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಆದ್ಯಾದೇಶ 2020 ಮತ್ತು ಕಲಂ 11(ಡಿ) ಪ್ರಾಣಿ ಹಿಂಸೆ ತಡೆಕಾಯಿದೆ 1960 ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya
error: Content is protected !!