37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

ಕೊಕ್ಕಡ ಕರ್ನಾಟಕ ಸರಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು,ಮಂಗಳೂರು ಕಿನ್ನಿಕಂಬಳ ರೋಸಾ ಮಿಸ್ತಿಕ ಪ.ಪೂ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಅ.3ರಂದು ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾ ಸಭಾಭವನದಲ್ಲಿ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮತ್ತು ಉದ್ಘಾಟನೆಯನ್ನು ಮಂಗಳೂರು ಬೆಥನಿ ಪ್ರಾಂತ್ಯಾಧಿಕಾರಿಣಿ ಲಿಲ್ಲಿ ಪಿರೇರ.ಬಿ.ಎಸ್ ಅವರು ನಡೆಸಿಕೊಟ್ಟರು. ಸಂತ ಜೋನರ ದೇವಾಲಯ ಧರ್ಮಗುರು ಫಾ.ಅನಿಲ್ ಪ್ರಕಾಶ್ ಡಿಸಿಲ್ವ ಅವರು ಆಶೀರ್ವಚನ ನೀಡಿದರು.

ಅತಿಥಿಗಳಾಗಿ ಸಂತ ಜೋನರ ಹಿ.ಪ್ರಾ. ಶಾಲೆ ಮುಖ್ಯಶಿಕ್ಷಕಿ ಜೆನೆವಿವ್ ಫೆರ್ನಾಂಡೀಸ್,ಕೊಕ್ಕಡ ಕಪಿಲ ಅಧ್ಯಕ್ಷ ಸಂತೋಷ್ ಜೈನ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಉಮೇಶ್, ಕೊಕ್ಕಡ ಸಂತ ಜೋನರ ದೇವಾಲಯ ಪಾಲನಾ ಸಮಿತಿ ಉಪಾಧ್ಯಕ್ಷ ನೋಯೆಲ್ ಮೊಂತೇರೊ, ಕಾರ್ಯದರ್ಶಿ ವೀಣಾ, ಮಿಸ್ತಿಕ ಪ.ಪೂ ಕಾಲೇಜು ಸಂಚಾಲಕಿ ರೋಸ್ ಲೀಟಾ.ಬಿ.ಎಸ್ , ರೋಸಾ ಮಿಸ್ತಿಕಾ ಪ.ಪೂ ಕಾಲೇಜು ಪ್ರಾಚಾರ್ಯ ಡಾ.ಸಾಧನಾ ಬಿ.ಎಸ್ ಉಪಸ್ಥಿತರಿದ್ದರು.

ಕೌಕ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೆಶ್ ಬಾಣಜಾಲು ಅವರು ಶುಭ ಹಾರೈಸಿದರು. ಸದಸ್ಯ ಮಹೇಶ್ ಉಪಸ್ಥಿತರಿದ್ದರು. ಅ.3ರಿಂದ ಅ.9ರವರೆಗೆ ನಡೆಯುವ ಎನ್ ಎಸ್ ಎಸ್ ಶಿಬಿರದಲ್ಲಿ 51 ಶಿಬಿರಾರ್ಥಿಗಳು ಭಾಗವಹಿಸುತ್ತಾರೆ. ಡಾ.ಸಾಧನಾ ಸ್ವಾಗತಿಸಿದರು, ಸಹಶಿಬಿರಾಧಿಕಾರಿ ಆ್ಯ ಮ್ಸಿ ಲ್ ಫೆರ್ನಾಂಡೀಸ್ ವಂದಿಸಿದರು. ಶಿಬಿರಾಧಿಕಾರಿ ಅವಿಲ್ ರೆನಿಲ್ ಡಿಸಿಲ್ವಾ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳು, ಪೋಷಕರು, ಊರ ನಾಗರಿಕರು ಭಾಗವಹಿಸಿದರು.

Related posts

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya

ತೋಟತ್ತಾಡಿ: ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್ ಕಕ್ಕಿಂಜೆ

Suddi Udaya

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!