25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

ಕೊಕ್ಕಡ ಕರ್ನಾಟಕ ಸರಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು,ಮಂಗಳೂರು ಕಿನ್ನಿಕಂಬಳ ರೋಸಾ ಮಿಸ್ತಿಕ ಪ.ಪೂ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಅ.3ರಂದು ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾ ಸಭಾಭವನದಲ್ಲಿ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮತ್ತು ಉದ್ಘಾಟನೆಯನ್ನು ಮಂಗಳೂರು ಬೆಥನಿ ಪ್ರಾಂತ್ಯಾಧಿಕಾರಿಣಿ ಲಿಲ್ಲಿ ಪಿರೇರ.ಬಿ.ಎಸ್ ಅವರು ನಡೆಸಿಕೊಟ್ಟರು. ಸಂತ ಜೋನರ ದೇವಾಲಯ ಧರ್ಮಗುರು ಫಾ.ಅನಿಲ್ ಪ್ರಕಾಶ್ ಡಿಸಿಲ್ವ ಅವರು ಆಶೀರ್ವಚನ ನೀಡಿದರು.

ಅತಿಥಿಗಳಾಗಿ ಸಂತ ಜೋನರ ಹಿ.ಪ್ರಾ. ಶಾಲೆ ಮುಖ್ಯಶಿಕ್ಷಕಿ ಜೆನೆವಿವ್ ಫೆರ್ನಾಂಡೀಸ್,ಕೊಕ್ಕಡ ಕಪಿಲ ಅಧ್ಯಕ್ಷ ಸಂತೋಷ್ ಜೈನ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಉಮೇಶ್, ಕೊಕ್ಕಡ ಸಂತ ಜೋನರ ದೇವಾಲಯ ಪಾಲನಾ ಸಮಿತಿ ಉಪಾಧ್ಯಕ್ಷ ನೋಯೆಲ್ ಮೊಂತೇರೊ, ಕಾರ್ಯದರ್ಶಿ ವೀಣಾ, ಮಿಸ್ತಿಕ ಪ.ಪೂ ಕಾಲೇಜು ಸಂಚಾಲಕಿ ರೋಸ್ ಲೀಟಾ.ಬಿ.ಎಸ್ , ರೋಸಾ ಮಿಸ್ತಿಕಾ ಪ.ಪೂ ಕಾಲೇಜು ಪ್ರಾಚಾರ್ಯ ಡಾ.ಸಾಧನಾ ಬಿ.ಎಸ್ ಉಪಸ್ಥಿತರಿದ್ದರು.

ಕೌಕ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೆಶ್ ಬಾಣಜಾಲು ಅವರು ಶುಭ ಹಾರೈಸಿದರು. ಸದಸ್ಯ ಮಹೇಶ್ ಉಪಸ್ಥಿತರಿದ್ದರು. ಅ.3ರಿಂದ ಅ.9ರವರೆಗೆ ನಡೆಯುವ ಎನ್ ಎಸ್ ಎಸ್ ಶಿಬಿರದಲ್ಲಿ 51 ಶಿಬಿರಾರ್ಥಿಗಳು ಭಾಗವಹಿಸುತ್ತಾರೆ. ಡಾ.ಸಾಧನಾ ಸ್ವಾಗತಿಸಿದರು, ಸಹಶಿಬಿರಾಧಿಕಾರಿ ಆ್ಯ ಮ್ಸಿ ಲ್ ಫೆರ್ನಾಂಡೀಸ್ ವಂದಿಸಿದರು. ಶಿಬಿರಾಧಿಕಾರಿ ಅವಿಲ್ ರೆನಿಲ್ ಡಿಸಿಲ್ವಾ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳು, ಪೋಷಕರು, ಊರ ನಾಗರಿಕರು ಭಾಗವಹಿಸಿದರು.

Related posts

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್. ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ 

Suddi Udaya

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

Suddi Udaya
error: Content is protected !!