23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

ಕೊಕ್ಕಡ ಕರ್ನಾಟಕ ಸರಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು,ಮಂಗಳೂರು ಕಿನ್ನಿಕಂಬಳ ರೋಸಾ ಮಿಸ್ತಿಕ ಪ.ಪೂ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಅ.3ರಂದು ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾ ಸಭಾಭವನದಲ್ಲಿ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮತ್ತು ಉದ್ಘಾಟನೆಯನ್ನು ಮಂಗಳೂರು ಬೆಥನಿ ಪ್ರಾಂತ್ಯಾಧಿಕಾರಿಣಿ ಲಿಲ್ಲಿ ಪಿರೇರ.ಬಿ.ಎಸ್ ಅವರು ನಡೆಸಿಕೊಟ್ಟರು. ಸಂತ ಜೋನರ ದೇವಾಲಯ ಧರ್ಮಗುರು ಫಾ.ಅನಿಲ್ ಪ್ರಕಾಶ್ ಡಿಸಿಲ್ವ ಅವರು ಆಶೀರ್ವಚನ ನೀಡಿದರು.

ಅತಿಥಿಗಳಾಗಿ ಸಂತ ಜೋನರ ಹಿ.ಪ್ರಾ. ಶಾಲೆ ಮುಖ್ಯಶಿಕ್ಷಕಿ ಜೆನೆವಿವ್ ಫೆರ್ನಾಂಡೀಸ್,ಕೊಕ್ಕಡ ಕಪಿಲ ಅಧ್ಯಕ್ಷ ಸಂತೋಷ್ ಜೈನ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಉಮೇಶ್, ಕೊಕ್ಕಡ ಸಂತ ಜೋನರ ದೇವಾಲಯ ಪಾಲನಾ ಸಮಿತಿ ಉಪಾಧ್ಯಕ್ಷ ನೋಯೆಲ್ ಮೊಂತೇರೊ, ಕಾರ್ಯದರ್ಶಿ ವೀಣಾ, ಮಿಸ್ತಿಕ ಪ.ಪೂ ಕಾಲೇಜು ಸಂಚಾಲಕಿ ರೋಸ್ ಲೀಟಾ.ಬಿ.ಎಸ್ , ರೋಸಾ ಮಿಸ್ತಿಕಾ ಪ.ಪೂ ಕಾಲೇಜು ಪ್ರಾಚಾರ್ಯ ಡಾ.ಸಾಧನಾ ಬಿ.ಎಸ್ ಉಪಸ್ಥಿತರಿದ್ದರು.

ಕೌಕ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೆಶ್ ಬಾಣಜಾಲು ಅವರು ಶುಭ ಹಾರೈಸಿದರು. ಸದಸ್ಯ ಮಹೇಶ್ ಉಪಸ್ಥಿತರಿದ್ದರು. ಅ.3ರಿಂದ ಅ.9ರವರೆಗೆ ನಡೆಯುವ ಎನ್ ಎಸ್ ಎಸ್ ಶಿಬಿರದಲ್ಲಿ 51 ಶಿಬಿರಾರ್ಥಿಗಳು ಭಾಗವಹಿಸುತ್ತಾರೆ. ಡಾ.ಸಾಧನಾ ಸ್ವಾಗತಿಸಿದರು, ಸಹಶಿಬಿರಾಧಿಕಾರಿ ಆ್ಯ ಮ್ಸಿ ಲ್ ಫೆರ್ನಾಂಡೀಸ್ ವಂದಿಸಿದರು. ಶಿಬಿರಾಧಿಕಾರಿ ಅವಿಲ್ ರೆನಿಲ್ ಡಿಸಿಲ್ವಾ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳು, ಪೋಷಕರು, ಊರ ನಾಗರಿಕರು ಭಾಗವಹಿಸಿದರು.

Related posts

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya
error: Content is protected !!