September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

ತೋಟತ್ತಾಡಿ; ಶ್ರೀ ಉಳ್ಳಾಳ್ತಿ ಭಜನಾ ಮಂದಿರ ಅರಂತಬೈಲು ತೋಟತ್ತಾಡಿ ಮತ್ತು ನವರಾತ್ರಿ ಭಜನಾ ಸಮಿತಿ ಆರಂತಬೈಲು ತೋಟತ್ತಾಡಿ ಇದರ ಜಂಟಿ ಆಶ್ರಯದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮವನ್ನು ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಇರ್ವತ್ರಾಯ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಳ್ಳಾಲ್ತಿ ಭಜನಾ ಮಂದಿರದ ಗೌರವಾಧ್ಯಕ್ಷ ತಿಮ್ಮಪ್ಪ ಪೂಜಾರಿ ಹಾರಗಂಡಿ, ಅಧ್ಯಕ್ಷ ದಿನೇಶ್ ನಾಯ್ಕ ಕೋಟೆ, ಕಾರ್ಯದರ್ಶಿ ಸುಜಿತ್ ಶೆಟ್ಟಿ ಹಳೆ ಕಕ್ಕಿಂಜೆ, ನವರಾತ್ರಿ ಭಜನಾ ಸಮಿತಿಯ ಅಧ್ಯಕ್ಷ ನಾರಾಯಣ ಶೆಟ್ಟಿ ಕುಡೆಂಚ, ಉಪಾಧ್ಯಕ್ಷೆ ಉಷಾ ರಮಾನಂದ ಪೂಜಾರಿ, ಕಾರ್ಯದರ್ಶಿ ವಿನುತಾ ಶ್ರೀನಿವಾಸ ಪೂಜಾರಿ, ಜೊತೆ ಕಾರ್ಯದರ್ಶಿ ಸನತ್ ಕುಮಾರ್ ಮೂರ್ಜೆ ಅರ್ಚಕರಾದ ಬಾಲಚಂದ್ರ ಬಳ್ಳಿ ಮತ್ತು ಭಜನಾ ಮಂಡಳಿಯ ಮಾಜಿ ಅಧ್ಯಕ್ಷರುಗಳು, ಮಾಜಿ ಪದಾಧಿಕಾರಿಗಳು, ನವರಾತ್ರಿ ಸಮಿತಿಯ ಮಾಜಿ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು, ಮಂದಿರದ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಮಚ್ಚಿನ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ; ಶೌಚಾಲಯ ಕಾಮಗಾರಿ ಪರಿಶೀಲನೆ

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!