24.4 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕ ೧ ಮತ್ತು ೨ , ಯೂತ್ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಇದರ ಜಂಟಿ ಆಶ್ರಯದಲ್ಲಿ”ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಷಯದ ಮೇಲೆ ವಿಶೇಷ ಉಪನ್ಯಾಸವನ್ನು ಸೆ.28 ರಂದುಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರಿನ ಹಿರಿಯ ವೈದ್ಯಾಧಿಕಾರಿ ಡಾ.ಎಂ. ಅಣ್ಣಯ್ಯ ಕುಲಾಲ್ ಉಳ್ತುರ್ ಅವರು ಜೀವನದಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಮತ್ತು ಆರೋಗ್ಯಕ್ಕೆ ಪೂರಕವಾದ ಪೋಷಕಾಂಶಯುಕ್ತ ಯುಕ್ತ ಆಹಾರ ಪದಾರ್ಥಗಳನ್ನು, ತರಕಾರಿ, ಹಣ್ಣು ತಿನ್ನಬೇಕು ಮತ್ತು ನಮ್ಮ ಆರೋಗ್ಯಕ್ಕೆ ಬೇಕಾದ ಆಹಾರ ಗಳನ್ನು ಹೇಗೆ ಉಪಯೋಗಿಸಬೇಕು ಎಂಬ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಮಾಧವರವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಐಕ್ಯೂ ಎಸಿ ಸಂಚಾಲಕರಾದ ಡಾ. ಅವಿತ ಮರಿಯ ಕ್ವಾಡ್ರಸ್, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಪ್ರೊ. ಚಿತ್ರಾ ಪಡಿಯಾರ್ ಮತ್ತು ಪ್ರೊ. ಸಂತೋಷ್ ಪ್ರಭು, ಯೂತ್ ರೆಡ್ ಕ್ರಾಸ್‌ನ ಡಾ. ವೈಶಾಲಿ ಯು ಮತ್ತು ಪ್ರೊ| ಶೇಖರ್ ಕೆ, ರೋವರ್ಸ್ ಮತ್ತು ರೇಂಜರ್ಸ್ ನ ಸಂಯೋಜಕ ಡಾ. ಪ್ರೀತಿ ಕೆ ರಾವ್ ಮತ್ತು ಪ್ರೊ|ಆಂಜನೇಯ ಎಂ ಎನ್ ಉಪಸ್ಥಿತರಿದ್ದರು.
ಕು| ಏಕಿತ ಸಂನನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಜಿತೇಶ್ ಸ್ವಾಗತಿಸಿದರು, ಕು|ದಿವ್ಯಾ ವಂದಿಸಿದರು ಕು| ಯೋಗಿತಾ ನಿರೂಪಿಸಿದರು.

Related posts

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

Suddi Udaya
error: Content is protected !!