24.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕ ೧ ಮತ್ತು ೨ , ಯೂತ್ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಇದರ ಜಂಟಿ ಆಶ್ರಯದಲ್ಲಿ”ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಷಯದ ಮೇಲೆ ವಿಶೇಷ ಉಪನ್ಯಾಸವನ್ನು ಸೆ.28 ರಂದು ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರಿನ ಹಿರಿಯ ವೈದ್ಯಾಧಿಕಾರಿ ಡಾ.ಎಂ. ಅಣ್ಣಯ್ಯ ಕುಲಾಲ್ ಉಳ್ತುರ್ ಅವರು ಜೀವನದಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಮತ್ತು ಆರೋಗ್ಯಕ್ಕೆ ಪೂರಕವಾದ ಪೋಷಕಾಂಶಯುಕ್ತ ಯುಕ್ತ ಆಹಾರ ಪದಾರ್ಥಗಳನ್ನು, ತರಕಾರಿ, ಹಣ್ಣು ತಿನ್ನಬೇಕು ಮತ್ತು ನಮ್ಮ ಆರೋಗ್ಯಕ್ಕೆ ಬೇಕಾದ ಆಹಾರ ಗಳನ್ನು ಹೇಗೆ ಉಪಯೋಗಿಸಬೇಕು ಎಂಬ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಮಾಧವರವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಐಕ್ಯೂ ಎಸಿ ಸಂಚಾಲಕರಾದ ಡಾ. ಅವಿತ ಮರಿಯ ಕ್ವಾಡ್ರಸ್, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಪ್ರೊ. ಚಿತ್ರಾ ಪಡಿಯಾರ್ ಮತ್ತು ಪ್ರೊ. ಸಂತೋಷ್ ಪ್ರಭು, ಯೂತ್ ರೆಡ್ ಕ್ರಾಸ್‌ನ ಡಾ. ವೈಶಾಲಿ ಯು ಮತ್ತು ಪ್ರೊ| ಶೇಖರ್ ಕೆ, ರೋವರ್ಸ್ ಮತ್ತು ರೇಂಜರ್ಸ್ ನ ಸಂಯೋಜಕ ಡಾ. ಪ್ರೀತಿ ಕೆ ರಾವ್ ಮತ್ತು ಪ್ರೊ|ಆಂಜನೇಯ ಎಂ ಎನ್ ಉಪಸ್ಥಿತರಿದ್ದರು.
ಕು| ಏಕಿತ ಸಂನನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಜಿತೇಶ್ ಸ್ವಾಗತಿಸಿದರು, ಕು|ದಿವ್ಯಾ ವಂದಿಸಿದರು ಕು| ಯೋಗಿತಾ ನಿರೂಪಿಸಿದರು.

Related posts

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

Suddi Udaya

ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಅರಣ್ಯ ಇಲಾಖೆಯಿಂದ ಪ್ರಗತಿ ಬಂಧು ತಂಡಗಳಿಗೆ ಗಿಡ ವಿತರಣೆ

Suddi Udaya

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!