25.5 C
ಪುತ್ತೂರು, ಬೆಳ್ತಂಗಡಿ
April 24, 2026
ಶಿಕ್ಷಣ ಸಂಸ್ಥೆ

ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ: ಎನ್ ಎಸ್ ಎಸ್ ಮತ್ತು ಯುವಜನತೆ ವಿಶೇಷ ಉಪನ್ಯಾಸ

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ,ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕ 1ಮತ್ತು 2ರ ಆಶ್ರಯದಲ್ಲಿ “ಎನ್ ಎಸ್ ಎಸ್ ಮತ್ತು ಯುವಜನತೆ ” ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸವನ್ನು ಸೆ. 25 ರಂದುಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿ ಮಡಂತ್ಯಾರು ಗ್ರಾ.ಪಂ ಪಿಡಿಒ ಡಾ. ಪ್ರಕಾಶ್ ಅವರು ಜೀವನದಲ್ಲಿ ಶಿಸ್ತು ಸಂಯಮ , ಸೇವಾ ಮನೋಭಾವನೆಯ ಮಹತ್ವವನ್ನು ದೃಷ್ಟಾಂತಗಳ ಮೂಲಕ ವಿವರಿಸಿದರು. ಉತ್ತಮ ಸ್ವಯಂಸೇವಕ ರಾಷ್ಟ್ರವನ್ನು ಕಟ್ಟಿ ಬೆಳೆಸುವುದರಲ್ಲಿ ತನ್ನದೇ ಆದಂತಹ ಕೊಡುಗೆಯನ್ನು ನೀಡಬಹುದು ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ದತ್ತು ಗ್ರಾಮ ಸ್ವೀಕಾರ ಕಾರ್ಯಕ್ರಮವನ್ನು ನಡೆಸಲಾಯಿತು. ದತ್ತು ಗ್ರಾಮವಾದ ಮಡಂತ್ಯಾರ್ ನಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಕಾಲೇಜು ಹಾಗೂ ಗ್ರಾಮ ಪಂಚಾಯತ್ ಮಡಂತ್ಯಾರ್ ಇವರ ಸಹಯೋಗದೊಂದಿಗೆ ನಡೆಸಿಕೊಂಡು ಹೋಗಲು ಅನುವಾಗುವಂತೆ ೩ ವರ್ಷಗಳ ಒಡಂಬಡಿಕೆಯನ್ನು ಮಾಡಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ| ಮಾಧವರವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಐಕ್ಯೂ ಎಸಿ ಸಂಚಾಲಕ ಡಾ. ಅವಿತ ಮರಿಯ ಕ್ವಾಡ್ರಸ್, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಪ್ರೊ. ಚಿತ್ರಾ ಪಡಿಯಾರ್ ಮತ್ತು ಪ್ರೊ. ಸಂತೋಷ್ ಪ್ರಭು ಉಪಸ್ಥಿತರಿದ್ದರು. ಕುಮಾರಿ ಶ್ರೀ ಲಕ್ಷ್ಮಿ ಸ್ವಾಗತಿಸಿದರು,ಕುಮಾರಿ ಕವಿತಾ ವಂದಿಸಿದರು, ಕುಮಾರಿ ವರ್ಷಿನಿ ನಿರೂಪಿಸಿದರು,

Related posts

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya
error: Content is protected !!