April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

ಬೆಳಾಲು : ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬೆಳ್ತಂಗಡಿ ತಾಲೂಕು ಉಜಿರೆ ವಲಯ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.)ಬೆಳ್ತಂಗಡಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದ ಕ ಜಿಲ್ಲೆ, ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಇವರ ಮಾರ್ಗದರ್ಶನದೊಂದಿಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ, ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ-ಬೆಳಾಲು, ರೋಟರಿ ಕ್ಲಬ್ ಬೆಳ್ತಂಗಡಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ, ನವಜೀವನ ಸಮಿತಿ ಬೆಳ್ತಂಗಡಿ ತಾಲೂಕು, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ಜರಗುವ ಬೆಳಾಲು ನವಜೀನವ ಸಮಿತಿ ಸದಸ್ಯರ 25ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ 1867ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಫ್ರೌಡ ಶಾಲೆ ,ಬೆಳಾಲು ನಲ್ಲಿ ಜರುಗಿತು.

ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯ ಇವರು ದೀಪ ಬೆಳಗಿಸುವ ಮೂಲಕ ಉಧ್ಘಾಟಿಸಿ ಸಮಾಜದಲ್ಲಿ ನಾವು ಅನೇಕ ರೀತಿಯ ದುಶ್ಚಟಗಳನ್ನು ಗಮನಿಸುತ್ತಿದ್ದು, ಈ ದುಶ್ಚಟ ಸಮಾಜವನ್ನು ಗಂಭೀರವಾಗಿ ಹಾನಿ ಮಾಡುತ್ತದೆ ಮದ್ಯಪಾನ ಅನ್ನುವುದು ಮದ್ಯಪಾನ ಮಾಡುವ ವ್ಯಕ್ತಿಗೆ ಪರಿಣಾಮ ಬೀರದೆ ಕುಟುಂಬ ಮತ್ತು ಸಮಾಜಕ್ಕೆ ದುಷ್ಪರಿಣಾಮ ಬೀರುತ್ತದೆ, ಸಮಾಜಕ್ಕೆ ಹೊರೆಯಾಗುವವರನ್ನು ಸಮಾಜಕ್ಕೆ ಆಸರೆಯಾಗಿ ಮಾಡುವ ಈ ಮದ್ಯವರ್ಜನ ಶಿಬಿರವು ಯಶಸ್ವಿಯಾಗಲಿ ಎಂದು ಹಾರೈಸಿದರು.

ಉಡುಪಿ ಕರಾವಳಿ ಪ್ರಾದೇಶಿಕ ಕಛೇರಿ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತನಾಡಿ ಜನಜಾಗೃತಿ ವೇದಿಕೆ ಆರಂಭ, ಉದ್ದೇಶ, ಮದ್ಯವರ್ಜನ ಶಿಬಿರ ಅನುಷ್ಠಾನ, ರೂಪುರೇಷೆ, ಶಿಬಿರದ ದೈನಂದಿನ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಜನಜಾಗೃತಿ ವೇದಿಕೆ. ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ, ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ತಿಮ್ಮಪ್ಪ ಗೌಡ, ನಿವೃತ್ತ ಪ್ರಾದೇಶಿಕ ನಿರ್ದೇಶಕರು ಸೀತಾರಾಮ ಶೆಟ್ಟಿ, ಜನಜಾಗೃತಿ ವೇದಿಕೆ ಉಜಿರೆ ವಲಯಾಧ್ಯಕ್ಷರು ಶ್ರೀಮತಿ ಪುಷ್ಪಾ ಆರ್ ಶೆಟ್ಟಿ, ಆಡಳಿತ ಮಂಡಳಿ ಪಜಿರಡ್ಕ ದೇವಸ್ಥಾನ ಮಾಜಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ, ಮುಖ್ಯ ಸೇವಾ ಸಹಕಾರಿ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಗೌಡ, ಅಮೃತ್ ಟೆಕ್ಸ್ ಟೈಲ್ಸ್ ಮಾಲಕರು ಪ್ರಶಾಂತ್ ಜೈನ್, ಬೆಳಾಲು 1867ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಶಿಬಿರಾಧಿಕಾರಿ ದೇವಿಪ್ರಸಾದ್ ಸುವರ್ಣ, ಆರೋಗ್ಯ ಸಹಾಯಕಿ ಪ್ರೆಸಿಲ್ಲಾ, ಬೆಳ್ತಂಗಡಿ ಜನಜಾಗೃತಿ ವೇದಿಕೆ ಆಡಳಿತ ಯೋಜನಾಧಿಕಾರಿ ಮಾಧವಗೌಡ ಗುರುವಾಯನಕೆರೆ ಕ್ಷೇತ್ರ ಯೋಜನಾಧಿಕಾರಿ ದಯಾನಂದ ಉಪಸ್ಥಿತರಿದ್ದರು.

ಬೆಳ್ತಂಗಡಿ ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ, ಪ್ರಗತಿ ಬಂಧು ಒಕ್ಕೂಟದ ವಲಯಾಧ್ಯಕ್ಷರಾದ ಉಮರ್, ಅಧ್ಯಕ್ಷ ರತ್ನಾಕರ, ಗಂಗಾಧರ, ಶ್ರೀಮತಿ ನೀಲಾವತಿ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಸೂರಪ್ಪ, ವಲಯದ ಎಲ್ಲಾ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ನವಜೀವನ ಸಮಿತಿ ಸದಸ್ಯರು, ಜನಜಾಗೃತಿ ಗ್ರಾಮ ಸಮಿತಿ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯರು, ಪ್ರಗತಿ ಬಂದು ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

ಕ್ಷೇತ್ರ ಯೋಜನಾಧಿಕಾರಿಗಳಾದ ಸುರೇಂದ್ರ ಸ್ವಾಗತಿಸಿದರು, ವಲಯ ಮೇಲ್ವಿಚಾರಕಿ ಶ್ರೀಮತಿ ವನಿತಾ ವಂದಿಸಿದರು, ಕಾರ್ಯಕ್ರಮವನ್ನು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಮಧುರಾವಸಂತ್ ನಿರೂಪಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

500 ಮತ್ತು 1000 ಮುಖಬೆಲೆ ನೋಟು ಅಮಾನೀಕರಣ: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯಲ್ಲಿ ಭಜನಾ ಪರಿಷತ್ತು ಕಾರ್ಯದರ್ಶಿಯಿಂದ ಅಹವಾಲು ಸ್ವೀಕಾರ

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya
error: Content is protected !!