25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

ಮಲವಂತಿಗೆ : ಮಲವಂತಿಗೆ ಗ್ರಾಮದ ಏಳನೀರು ಹೋಗುವ ರಸ್ತೆಯ ಮುಖಾಂತರ 5 ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೇ ಎರಡು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಮುರಳಿಧರನಾಯ್ಕ ಕೆ ಜಿ , ಪೊಲೀಸ್ ಉಪನಿರೀಕ್ಷಕರು (ಕಾ&ಸು) ಬೆಳ್ತಂಗಡಿ ಪೊಲೀಸ್ ಠಾಣೆ ಬೆಳ್ತಂಗಡಿರವರು ಠಾಣಾ ಸಿಬ್ಬಂದಿಗಳೊಂದಿಗೆ 2 ಪಿಕಪ್ ವಾಹನಗಳನ್ನು ಅ.03ರಂದು ರಾತ್ರಿ ತಡೆಹಿಡಿದು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಅಕ್ರಮವಾಗಿ ಗುತ್ಯಾಡ್ಕದಿಂದ ದಿಡುಪೆ ರಸ್ತೆ ಮೂಲಕ ವಾಹನ ಒಂದರಲ್ಲಿ 2 ಗೋವು, ಮತ್ತೊಂದು ವಾಹನದಲ್ಲಿ 3 ಗೋವುಗಳನ್ನು ಹಿಂಸಾತ್ಮಕವಾಗಿ ತುಂಬಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ವಾಹನದಲ್ಲಿದ್ದ ಆಪಾದಿತರುಗಳ ಬಳಿ ವಿಚಾರಿಸಲಾಗಿ ಅವರುಗಳು ಯಾವುದೇ ಪರವಾನಿಗೆ ಇಲ್ಲದೇ ಜಾನುವಾರುಗಳನ್ನು ಮಾಂಸಮಾಡುವ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿರುತ್ತದೆ.

ಈ ಬಗ್ಗೆ ಮುಂದಿನ ಕಾನೂನುಕ್ರಮಕ್ಕಾಗಿ 02 ಪಿಕಪ್ ವಾಹನಗಳನ್ನು ಹಾಗೂ 05 ಜಾನುವಾರುಗಳನ್ನು ಮತ್ತು ಆರೋಪಿಗಳಾದ ಚಿಬಿದ್ರೆ ನಿವಾಸಿ ಯತೀಂದ್ರ (24) ,ಚಾರ್ಮಾಡಿ ನಿವಾಸಿ ಉಸ್ಮಾನ್ (36), ತೊಟತ್ತಾಡಿ ನಿವಾಸಿ ಅರವಿಂದ (30), ಚಿಬಿದ್ರೆ ನಿವಾಸಿ ಆರೀಫ್ (27) ಎಂಬವರುಗಳನ್ನು ವಶಕ್ಕೆ ಪಡೆದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 84/2024 ಕಲಂ 5,7,12 ಕರ್ನಾಟಕ ಜಾನುವಾರು ಪ್ರತಿಬಂಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಆದ್ಯಾದೇಶ 2020 ಮತ್ತು ಕಲಂ 11(ಡಿ) ಪ್ರಾಣಿ ಹಿಂಸೆ ತಡೆಕಾಯಿದೆ 1960 ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮದ್ದಡ್ಕ ಪಲ್ಕೆ ಎಂಬಲ್ಲಿ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ

Suddi Udaya
error: Content is protected !!