25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಕನ್ಯಾಡಿ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

155ನೇ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಶಾಲೆಯ ಆವರಣ ಹಾಗೂ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ನಂದ ಕೆ ದೀಪ ಬೆಳಗಿಸಿ ಭಾವಚಿತ್ರಕ್ಕೆ ಗೌರವ ಪೂರಕವಾದ ಪುಷ್ಪ ನಮನವನ್ನು ಸಲ್ಲಿಸಿದರು. ಶಿಕ್ಷಕ ವೃಂದದವರು ಹಾಗೂ ಶಾಲಾ ನಾಯಕ ಪುಷ್ಪ ನಮನ ಸಲ್ಲಿಸಿದರು. ನಂತರ ಸರ್ವಧರ್ಮ ಪ್ರಾರ್ಥನೆಯನ್ನು , ಧರ್ಮ ಗ್ರಂಥಗಳ ಪಠಣವನ್ನು ಮಾಡಲಾಯಿತು. ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಕುರಿತಂತೆ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ತಾಯಿ ಹೆಸರಿನಲ್ಲಿ ಒಂದು ಗಿಡ ಯೋಜನೆಯಡಿ ನಮ್ಮ ಶಾಲೆಯ ಮಕ್ಕಳು ಪೋಷಕರೊಂದಿಗೆ ಶಾಲೆಗೆ ಆಗಮಿಸಿ ಕರಿಬೇವು, ಸೀತಾಫಲ, ನಿಂಬೆ, ನೇರಳೆ, ತೆಂಗು ಮೊದಲಾದ ಗಿಡಗಳನ್ನು ನೆಟ್ಟು ಅವುಗಳನ್ನು ಚೆನ್ನಾಗಿ ಬೆಳೆಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

Related posts

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ಮೈರೋಳ್ತಡ್ಕ 30 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya
error: Content is protected !!