ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya

ಗುರುವಾಯನಕೆರೆ: ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ,ಬೆಳ್ತಂಗಡಿ ಭಾಜಪ ಪಕ್ಷದ ಕಚೇರಿಯಲ್ಲಿ ಸುಮಾರು ವರ್ಷಗಳ ಪಕ್ಷದ‌ ಕಚೇರಿ ಕೆಲಸ ಕಾರ್ಯಗಳನ್ನು ಮಾಡುತ್ತ, ಪಕ್ಷದ ಶಿಸ್ತಿನ ಶಿಪಾಯಿಯಾಗಿದ್ದ ಪಾಂಡೇಶ್ವರ ನಿವಾಸಿ ನಾರಾಯಣ ಆಚಾರ್ (55ವ) ಅವರು ಇಂದು ಸಂಜೆ ಗುರುವಾಯನಕೆರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮಧ್ಯಾಹ್ನ ತೀವ್ರ ಅಸ್ವಸ್ಥಗೊಂಡಾಗ ಅವರನ್ನು ಗುರುವಾಯನಕೆರೆ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಸಂಜೆ ಆಸ್ಪತ್ರೆಯಲ್ಲಿ ನಿಧನರಾದರೆನ್ನಲಾಗಿದೆ.

ಮೃತರು ತಂದೆ ಚಂದ್ರಯ್ಯ ಆಚಾರ್ಯ, ತಾಯಿ ಜಾನಕಿ, ಪತ್ನಿ, ಶಾರದಾ ಪುತ್ರ ವಿಕ್ರಂ, ಪುತ್ರಿಯರಾದ ಸಹನಾ ಹಾಗೂ ರಮ್ಯ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Comment

error: Content is protected !!