22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

ಕೊಕ್ಕಡ ಕರ್ನಾಟಕ ಸರಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು,ಮಂಗಳೂರು ಕಿನ್ನಿಕಂಬಳ ರೋಸಾ ಮಿಸ್ತಿಕ ಪ.ಪೂ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಅ.3ರಂದು ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾ ಸಭಾಭವನದಲ್ಲಿ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮತ್ತು ಉದ್ಘಾಟನೆಯನ್ನು ಮಂಗಳೂರು ಬೆಥನಿ ಪ್ರಾಂತ್ಯಾಧಿಕಾರಿಣಿ ಲಿಲ್ಲಿ ಪಿರೇರ.ಬಿ.ಎಸ್ ಅವರು ನಡೆಸಿಕೊಟ್ಟರು. ಸಂತ ಜೋನರ ದೇವಾಲಯ ಧರ್ಮಗುರು ಫಾ.ಅನಿಲ್ ಪ್ರಕಾಶ್ ಡಿಸಿಲ್ವ ಅವರು ಆಶೀರ್ವಚನ ನೀಡಿದರು.

ಅತಿಥಿಗಳಾಗಿ ಸಂತ ಜೋನರ ಹಿ.ಪ್ರಾ. ಶಾಲೆ ಮುಖ್ಯಶಿಕ್ಷಕಿ ಜೆನೆವಿವ್ ಫೆರ್ನಾಂಡೀಸ್,ಕೊಕ್ಕಡ ಕಪಿಲ ಅಧ್ಯಕ್ಷ ಸಂತೋಷ್ ಜೈನ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಉಮೇಶ್, ಕೊಕ್ಕಡ ಸಂತ ಜೋನರ ದೇವಾಲಯ ಪಾಲನಾ ಸಮಿತಿ ಉಪಾಧ್ಯಕ್ಷ ನೋಯೆಲ್ ಮೊಂತೇರೊ, ಕಾರ್ಯದರ್ಶಿ ವೀಣಾ, ಮಿಸ್ತಿಕ ಪ.ಪೂ ಕಾಲೇಜು ಸಂಚಾಲಕಿ ರೋಸ್ ಲೀಟಾ.ಬಿ.ಎಸ್ , ರೋಸಾ ಮಿಸ್ತಿಕಾ ಪ.ಪೂ ಕಾಲೇಜು ಪ್ರಾಚಾರ್ಯ ಡಾ.ಸಾಧನಾ ಬಿ.ಎಸ್ ಉಪಸ್ಥಿತರಿದ್ದರು.

ಕೌಕ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೆಶ್ ಬಾಣಜಾಲು ಅವರು ಶುಭ ಹಾರೈಸಿದರು. ಸದಸ್ಯ ಮಹೇಶ್ ಉಪಸ್ಥಿತರಿದ್ದರು. ಅ.3ರಿಂದ ಅ.9ರವರೆಗೆ ನಡೆಯುವ ಎನ್ ಎಸ್ ಎಸ್ ಶಿಬಿರದಲ್ಲಿ 51 ಶಿಬಿರಾರ್ಥಿಗಳು ಭಾಗವಹಿಸುತ್ತಾರೆ. ಡಾ.ಸಾಧನಾ ಸ್ವಾಗತಿಸಿದರು, ಸಹಶಿಬಿರಾಧಿಕಾರಿ ಆ್ಯ ಮ್ಸಿ ಲ್ ಫೆರ್ನಾಂಡೀಸ್ ವಂದಿಸಿದರು. ಶಿಬಿರಾಧಿಕಾರಿ ಅವಿಲ್ ರೆನಿಲ್ ಡಿಸಿಲ್ವಾ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳು, ಪೋಷಕರು, ಊರ ನಾಗರಿಕರು ಭಾಗವಹಿಸಿದರು.

Related posts

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya
error: Content is protected !!