27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆ ರಾಷ್ಟ್ರೀಯ ಸೇವಾ ಯೋಜನೆ ಇದರ ಸುವರ್ಣ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ “ಸುವರ್ಣ ಸಮ್ಮಿಲನ” ಇದು ಸುವರ್ಣ ಹೆಜ್ಜೆಗಳ ಅವಲೋಕನ ಕಾರ್ಯಕ್ರಮವು ಅ. 05 ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳದ ಹಷೇ೯ಂದ್ರ ಕುಮಾರ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಪ್ರಾಂಶುಪಾಲರು ಡಾ. ಬಿ. ಎ. ಕುಮಾರ ಹೆಗ್ಡೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಪ್ರತಾಪ್ ಲಿಂಗಯ್ಯ, ಮಂಗಳೂರು ರಾಷ್ಟ್ರೀಯ ಸೇವಾ ಯೋಜನೆ, ಸಂಯೋಜಕರು ಡಾ. ಶೇಷಪ್ಪ ಕೆ., ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸೇವಾ ಪಥ – ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಸಮಾರಂಭದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಹಾಗೂ ಸಮಾಜ ಸೇವಕ ರವಿ ಕಟಪಾಡಿ ಇವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಹಾಗೂ ಹಿರಿಯ ಯೋಜನಾಧಿಕಾರಿಗಳಿಗೆ , ಸ್ವಯಂಸೇವಕ ಸಾಧಕರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಯುನಿಟ್ 1 ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. , ಯುನಿಟ್ 2 ಯೋಜನಾಧಿಕಾರಿ ಶ್ರೀಮತಿ ದೀಪಾ ಆರ್. ಪಿ., ಹಾಗೂ ಕಾಲೇಜಿನ ಹಿರಿಯ ಯೋಜನಾಧಿಕಾರಿಗಳು, ವಿದ್ಯಾರ್ಥಿ ನಾಯಕರು ಮತ್ತು ಸ್ವಯಂಸೇವಕರು ಉಪಸ್ಥಿತರಿದ್ದರು.

ಸ್ವಯಂಸೇವಕರು ಪ್ರಾರ್ಥಿಸಿ, ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಸ್ವಾಗತಿಸಿದರು. ದೀಕ್ಷಿತ್ ರೈ ಮತ್ತು ಕು. ಸಿಂಚನ ಕಲ್ಲೂರಾಯ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ದೀಪಾ ಆರ್.ಪಿ. ವಂದಿಸಿದರು.

Related posts

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ಸರಸ್ವತಿ ಆಂಗ್ಲ ಮಾಧ್ಯಮಶಾಲೆ ಮುಂಡಾಜೆಯಲ್ಲಿ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ.

Suddi Udaya
error: Content is protected !!