ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

ಬೆಳ್ತಂಗಡಿ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಸಿ ರೋಡ್ ಎಸ್ ಬಿ ಐ ಬ್ಯಾಂಕಿನಲ್ಲಿ ಸೆ.04 ರಂದು ಬೆಳಿಗ್ಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 147/2024 ಕಲಂ: 303(2) ಬಿ ಎನ್ ಎಸ್ – 2023 ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ, ಆರೋಪಿಯ ಪತ್ತೆಗಾಗಿ ರಚಿಸಲಾಗಿದ್ದ ಬಂಟ್ವಾಳ ಉಪ-ವಿಭಾಗದ ವಿಶೇಷ ತನಿಖಾ ತಂಡವು, ಆರೋಪಿ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಎಂಬಲ್ಲಿ ಆರೋಪಿ ಬೆಳ್ತಂಗಡಿ ತಾಲೂಕಿನ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ (32), ಎಂಬಾತನನ್ನು ವಶಕ್ಕೆ ಪಡೆದು, ಆರೋಪಿಯಿಂದ 80,000 ರೂ ನಗದು ಹಣವನ್ನು ಸ್ವಾಧೀನಪಡಿಸಿರುತ್ತಾರೆ.

ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್, ಐಪಿಎಸ್ ರವರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರರವರ ಮಾರ್ಗದರ್ಶನದಲ್ಲಿ, ಎಸ್. ವಿಜಯಪ್ರಸಾದ್, ಡಿ.ವೈ.ಎಸ್.ಪಿ. ಬಂಟ್ವಾಳ ರವರ ನೇತೃತ್ವದ, ಹರೀಶ್ ಎಂ.ಆರ್, ಪಿ.ಎಸ್. ಐ. ಬಂಟ್ವಾಳ ಗ್ರಾಮಾಂತರ ಠಾಣೆರವರ ವಿಶೇಷ ಪತ್ತೆ ತಂಡವನ್ನು ರಚಿಸಿರುತ್ತಾರೆ. ತನಿಖಾ ತಂಡದಲ್ಲಿ ಹೆಚ್ ಸಿ ಹರಿಶ್ಚಂದ್ರ , ಹೆಚ್ ಸಿ ರಾಧಾಕೃಷ್ಣ, ಪಿಸಿಗಳಾದ ಬಸವರಾಜ ಎಚ್ ,ಕೆ, ಕುಮಾರ್ ಎಚ್,ಕೆ, ಅಶೋಕ ಮತ್ತು ರಂಜಾನ್ ರವರುಗಳು ಕಾರ್ಯನಿರ್ವಹಿಸಿರುತ್ತಾರೆ.

Related posts

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜು-ತರಗತಿ ಕೊಠಡಿಗಳ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya
error: Content is protected !!